ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆ: ಕಮಲ ಪಾಳಯಕ್ಕೆ ಬಿಗ್‌ ಶಾಕ್‌..!

Published : Oct 18, 2022, 09:05 PM IST
ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆ:  ಕಮಲ ಪಾಳಯಕ್ಕೆ ಬಿಗ್‌ ಶಾಕ್‌..!

ಸಾರಾಂಶ

ಬರುವ ಚುನಾವಣೆಯಲ್ಲಿ ಬಂಡಾಯ ಯಾವ ರೀತಿ ತಿರುವು ಪಡೆಯುತ್ತಿದೆ ಎಂಬುವುದು ತೀವ್ರ ಕುತೂಹಲ ಮೂಡಿಸಿದೆ.

ವಿಜಯಪುರ(ಅ.18):  ವಿಜಯಪುರ ಮಹಾನಗರಪಾಲಿಕೆ ಬಿಜೆಪಿಯ ಮಾಜಿ ಮೇಯರ್‌ ಮತ್ತು ಮಾಜಿ ಉಪ ಮೇಯರ್‌ ಟಿಕೆಟ್‌ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದು ಜೆಡಿಎಸ್‌ ಪಕ್ಷದಿಂದ ಚುನಾವಣೆ ಅಖಾಢಕ್ಕಿಳಿದು, ಬಿಜೆಪಿಗೆ ದೊಡ್ಡ ಶಾಕ್‌ ನೀಡಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆ ಮಾಜಿ ಮೇಯರ್‌ ಸಂಗೀತಾ ಪೋಳ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬೆಂಬಲಿಗರಾಗಿದ್ದು, ಬಿಜೆಪಿಯಲ್ಲಿಯೇ ತಮ್ಮ ಅಸ್ತಿತ್ವ ಕಂಡುಕೊಂಡು ಎರಡು ಬಾರಿ ಮೇಯರ್‌ ಆಗಿದ್ದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ಆಪ್ತರಲ್ಲಿ ಒಬ್ಬರಾಗಿರುವ ಆನಂದ ಧುಮಾಳೆ ಅವರಿಗೂ ಕೂಡಾ ಟಿಕೆಟ್‌ ಕೈ ತಪ್ಪಿದೆ.

ಆರ್‌ಎಸ್ಎಸ್ ಬ್ರಿಟಿಷ್ ಜೊತೆಗೆ ಶಾಮೀಲು ಆಗಿದ್ರು: ರಾಮಲಿಂಗಾರೆಡ್ಡಿ ವಾಗ್ದಾಳಿ

ಮಾಜಿ ಮೇಯರ್‌ ಸಂಗೀತಾ ಪೋಳ ಅವರಿಗೆ ಟಿಕೆಟ್‌ ಸಿಗದ್ದಕ್ಕೆ ಅಸಮಾಧಾನಗೊಂಡು ಪರಿಶಿಷ್ಟಜಾತಿ ಮಹಿಳೆ ಗುಂಪಿಗೆ ಮೀಸಲಾಗಿರುವ ವಾರ್ಡ್‌ ನ. 33ರಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಂಡಾಯದ ಬಾವುಟ ಹಾರಿಸಿದ್ದಾರೆ.

ಅಲ್ಲದೆ ಹಿಂದುಳಿದ ಬ ವರ್ಗಕ್ಕೆ ಮೀಸಲಾದ 30ನೇ ವಾರ್ಡ್‌ನಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಾಲಿಕೆಯ ಮಾಜಿ ಉಪ ಮೇಯರ್‌ ಬಿಜೆಪಿಯ ಆನಂದ ಧುಮಾಳೆ ಅವರು ಸ್ಪರ್ಧಿಸಿದ್ದಾರೆ. ಟಿಕೆಟ್‌ ಸಿಗದೆ ಈ ಇಬ್ಬರು ಬಿಜೆಪಿಗರು ಜೆಡಿಎಸ್‌ ಪಕ್ಷದಿಂದ ಚುನಾವಣೆ ಕಣಕ್ಕಿಳಿದು ಬಿಜೆಪಿಗೆ ಆಘಾತ ನೀಡಿದ್ದಾರೆ. ಬರುವ ಚುನಾವಣೆಯಲ್ಲಿ ಬಂಡಾಯ ಯಾವ ರೀತಿ ತಿರುವು ಪಡೆಯುತ್ತಿದೆ ಎಂಬುವುದು ತೀವ್ರ ಕುತೂಹಲ ಮೂಡಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್