ಲೋಕಸಭಾ ಚುನಾವಣೆ ಚುನಾವಣೆ 2024: ಇಂದು ಬಿಜೆಪಿ 13 ಲೋಕಸಭೆ ಕ್ಷೇತ್ರಗಳ ಮುಖಂಡರ ಸಭೆ

Published : Jan 10, 2024, 08:59 AM IST
ಲೋಕಸಭಾ ಚುನಾವಣೆ ಚುನಾವಣೆ 2024: ಇಂದು ಬಿಜೆಪಿ 13 ಲೋಕಸಭೆ ಕ್ಷೇತ್ರಗಳ ಮುಖಂಡರ ಸಭೆ

ಸಾರಾಂಶ

ಒಟ್ಟು 13 ಲೋಕಸಭಾ ಕ್ಷೇತ್ರ ಗಳನ್ನು ಒಳಗೊಂಡ ಮೂರು ಕ್ಲಸ್ಟರ್‌ಗಳ ಸಭೆ ನಿಗದಿಯಾಗಿದೆ. ಬೆಳಗ್ಗೆ ಮೊದಲಿಗೆ ಬೀದ‌ರ್, ಕಲಬುರ್ಗಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಕ್ಷೇತ್ರಗಳನ್ನು ಒಳಗೊಂಡ ಕಲ್ಯಾಣ ಕರ್ನಾಟಕ ಕ್ಲಸರ್‌ಸಭೆ ನಡೆಯಲಿದೆ. ನಂತರ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳನ್ನು ಒಳಗೊಂಡ ಮೈಸೂರು ಕ್ಲಸ್ಟರ್ ಸಭೆ ಜರುಗಲಿದೆ. ಬಳಿಕ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗಳನ್ನು ಒಳಗೊಂಡ ತುಮಕೂರು ಕ್ಲಸ್ಟರ್ ಸಭೆ ನಡೆಯಲಿದೆ.

ಬೆಂಗಳೂರು(ಜ.10):  ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿಯು ಬುಧ ವಾರ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ 13 ಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದೆ. ಸೋಮವಾರ ನಡೆದ ಪಕ್ಷದ ಪ್ರಮುಖರ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ವಿವಿಧ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಕ್ಲಸ್ಟರ್‌ಗಳನ್ನು ರಚಿಸಲಾಗಿತ್ತು. ಜತೆಗೆ ಬುಧವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಎಲ್ಲ ಕ್ಲಸ್ಟರ್‌ಗಳ ಸಭೆ ನಡೆಸುವ ನಿರ್ಧಾರವನ್ನೂ ಕೈಗೊಳ್ಳಲಾಗಿತ್ತು.

ಆ ಪ್ರಕಾರ ಬುಧವಾರ ಬೆಳಗ್ಗೆಯಿಂದ ಸಂಜೆವರೆಗೆ ಒಟ್ಟು 13 ಲೋಕಸಭಾ ಕ್ಷೇತ್ರ ಗಳನ್ನು ಒಳಗೊಂಡ ಮೂರು ಕ್ಲಸ್ಟರ್‌ಗಳ ಸಭೆ ನಿಗದಿಯಾಗಿದೆ. ಬೆಳಗ್ಗೆ ಮೊದಲಿಗೆ ಬೀದ‌ರ್, ಕಲಬುರ್ಗಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಕ್ಷೇತ್ರಗಳನ್ನು ಒಳಗೊಂಡ ಕಲ್ಯಾಣ ಕರ್ನಾಟಕ ಕ್ಲಸರ್‌ಸಭೆ ನಡೆಯಲಿದೆ. ನಂತರ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳನ್ನು ಒಳಗೊಂಡ ಮೈಸೂರು ಕ್ಲಸ್ಟರ್ ಸಭೆ ಜರುಗಲಿದೆ. ಬಳಿಕ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗಳನ್ನು ಒಳಗೊಂಡ ತುಮಕೂರು ಕ್ಲಸ್ಟರ್ ಸಭೆ ನಡೆಯಲಿದೆ.

ವಿಜಯಪುರ ಮೇಯರ್‌ ಹುದ್ದೆ ಕಾಂಗ್ರೆಸ್‌ ಪಾಲು: ಯತ್ನಾಳ್‌ಗೆ ಮುಖಭಂಗ

ಈ ಸಭೆಯಲ್ಲಿ ಆಯಾ ಕ್ಷೇತ್ರದ ಜನಪ್ರತಿ ನಿಧಿಗಳು, ಹಾಲಿ ಪದಾಧಿಕಾರಿಗಳು ಹಾಗೂ ಮುಖಂಡರು ಪಾಲ್ಗೊಂಡು ಪಕ್ಷ ಸಂಘಟನೆ ಕುರಿತಂತೆ ತಮ್ಮ ಅಭಿಪ್ರಾಯ ಹಾಗೂ ಅಹ ವಾಲುಗಳನ್ನು ಪ್ರಸ್ತಾಪಿಸಲಿದ್ದಾರೆ. ಜತೆಗೆ ಯಾರು ಅಭ್ಯರ್ಥಿಗಳಾದರೆ ಅನುಕೂಲವಾಗ ಬಹುದು ಎಂಬ ವಿಷಯವೂ ಪ್ರಸ್ತಾಪ ವಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!