
ಬೆಂಗಳೂರು, [ನ.30]: ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಸಚಿವ ಆಕಾಂಕ್ಷಿಗಳ ಪಟ್ಟಿ ಆಂಜನೆಯ್ಯನ ಬಾಲದಂತೆ ಬೆಳದಿದೆ.
ಇದ್ರಿಂದ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದರಿಂದ ಸಂಪುಟ ವಿಸ್ತರಣೆಯನ್ನ ಮುಂದೂಡುತ್ತಿದೆ. ಮತ್ತೊಂದೆಡೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಕಾಂಗ್ರೆಸ್ ಪಾಳೇಯದಲ್ಲಿ ಅತೃಪ್ತಿ ಭುಗಿಲೆದ್ದಿದೆ.
ರಾಜ್ಯ ಕಾಂಗ್ರೆಸ್ ಅತೃಪ್ತಿ ಸ್ಫೋಟ?: ಮುಂಬೈಗೆ ಹೊರಟ 10 ಶಾಸಕರು!
ಈ ಮಧ್ಯೆ ಇಂದು [ಶುಕ್ರವಾರ] ರಮೇಶ್ ಜಾರಕಿಹೊಳಿ ಮನೆಗೆ ಬಿಜೆಪಿ ಶಾಸಕರ ದಂಡೇ ದೌಡಾಯಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಶಾಸಕ ಸಿದ್ದು ಸವದಿ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಹಲವು ಬಿಜೆಪಿ ನಾಯಕರ ದಂಡೇ ರಮೇಶ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ತೆರಳಿದ್ದಾರೆ.
ಆದ್ರೆ ಈ ಬಗ್ಗೆ ಸ್ವತಃ ಪೌರಾಡಳಿತ ರಮೇಶ್ ಜಾರಕೊಹೊಳಿ ಪ್ರತಿಕ್ರಿಯೆಸಿದ್ದು , ಮುಂಬೈಗೆ ಹೋಗುವ ಬಗ್ಗೆ ಪ್ಲಾನ್ ಮಾಡಿಲ್ಲ. ನನ್ನ ಹೆಸರಿಗೆ ಡ್ಯಾಮೇಜ್ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ನ ಸ್ವಯಂ ಘೋಷಿತ ನಾಯಕರಿಂದಲೇ ನನ್ನ ಹೆಸರನ್ನು ಡ್ಯಾಮೇಜ್ ಮಾಡಲು ಷಡ್ಯಂತ್ರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನ ಶಾಸಕರು ಬಿಜೆಪಿಗೆ ಹೋಗುತ್ತಾರೆ ಎಂಬ ಸುದ್ದಿಯನ್ನು ಕಾಂಗ್ರೆಸ್ನವರೆ ಹಬ್ಬಿಸಿದ್ದಾರೆ. ಕಾಂಗ್ರೆಸ್ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಕಾಂಗ್ರೆಸ್ನಲ್ಲಿದ್ದುಕೊಂಡೇ ಆಗಾಗ್ಗೆ ಭಿನ್ನಮತ ಹೊರ ಹಾಕುತ್ತಿರುವ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ಶಾಸಕರು ಇಂದು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.