
ಬೆಂಗಳೂರು [ನ.09] : ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ನ ತೂಗುಯ್ಯಾಲೆಯಲ್ಲಿ ಮುಂದುವರೆದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಉಪಚುನಾವಣೆ ಎದುರಿಸಲಿರುವ 15 ವಿಧಾನಸಭಾ ಕ್ಷೇತ್ರಗಳಲ್ಲಿ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದೆ.
ಉಪ ಚುನಾವಣೆ ಮುಂದೂಡುವಂತೆ ಅನರ್ಹರು ನೀಡಿರುವ ಅರ್ಜಿಯನ್ನು ಚುನಾವಣಾ ಆಯೋಗ ಪರಿಗಣಿಸುತ್ತದೆಯೇ ಅಥವಾ ಇಲ್ಲವೇ ಎಂಬ ಗೊಂದಲದ ನಡುವೆಯೇ ಈ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಸೋಮವಾರ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿ, ಅಭ್ಯರ್ಥಿ ಯಾರು ಎಂಬುದಕ್ಕಿಂತ ಪಕ್ಷ ಮತ್ತು ಪಕ್ಷದ ಚಿಹ್ನೆ ಮುಖ್ಯ ಎಂಬ ಉದ್ದೇಶದಿಂದ ಆಯಾ ಕ್ಷೇತ್ರಗಳಲ್ಲಿ ಸಿದ್ಧತೆ ನಡೆಸುವಂತೆ ಸೂಚನೆ ರವಾನಿಸಲಾಗಿದೆ.
ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆಯ ಗೌಡರು
ಈಗಾಗಲೇ ಎಲ್ಲ ಬೂತ್ ಕಮಿಟಿಗಳನ್ನು ಹೊಸದಾಗಿ ರಚಿಸಿರುವುದರಿಂದ ಅವುಗಳು ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಾರ್ಯಪ್ರವೃತ್ತವಾಗಿವೆ. ಪಕ್ಷ ಗೆಲ್ಲಬೇಕು ಎಂಬ ಏಕೈಕ ಗುರಿಯೊಂದಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ರಾಜ್ಯ ಘಟಕದಿಂದ ಸಂದೇಶ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಫಿಟ್ ಆಗಿದ್ದವರಿಗೆ ಆದ್ಯತೆ
ಬರುವ ಡಿಸೆಂಬರ್ ತಿಂಗಳಲ್ಲಿ ಪಕ್ಷದ ಮಂಡಲ ಮತ್ತು ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿಸಲು ಉದ್ದೇಶಿಸಲಾಗಿದ್ದು, ದೈಹಿಕವಾಗಿ ಗಟ್ಟಿಯಾಗಿದ್ದವರಿಗೆ ಆದ್ಯತೆ ನೀಡಲು ಬಿಜೆಪಿಯಲ್ಲಿ ಗಂಭೀರ ಚಿಂತನೆ ನಡೆದಿದೆ. ಮಂಡಲ ಅಧ್ಯಕ್ಷರಾಗಲು ಸರಿಸುಮಾರು 50 ವರ್ಷದ ಆಸುಪಾಸಿನಲ್ಲಿರುವವರು ಹಾಗೂ ಜಿಲ್ಲಾಧ್ಯಕ್ಷರಾಗಲು 60ರ ಆಸುಪಾಸಿನಲ್ಲಿ ಇರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚು ವಯಸ್ಸಾಗಿ ದೈಹಿಕವಾಗಿ ಗಟ್ಟಿಯಿಲ್ಲದವರಿಗೆ ಓಡಾಡಲು ಕಷ್ಟಎಂಬ ಕಾರಣಕ್ಕಾಗಿ ಅಂಥವರನ್ನು ಸಂಘಟನೆಯ ಅಧ್ಯಕ್ಷ ಹುದ್ದೆಗೆ ಪರಿಗಣಿಸುವುದು ಬೇಡ ಎಂಬ ಮಾತು ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.