ಸಿಎಂ ಬದಲಾವಣೆ ವಿಚಾರ: ಬಿಜೆಪಿ ನಾಯ​ಕ​ರ ಪ್ರತಿಕ್ರಿಯೆ

Kannadaprabha News   | Asianet News
Published : Sep 12, 2020, 02:24 PM ISTUpdated : Sep 12, 2020, 02:26 PM IST
ಸಿಎಂ ಬದಲಾವಣೆ ವಿಚಾರ: ಬಿಜೆಪಿ ನಾಯ​ಕ​ರ ಪ್ರತಿಕ್ರಿಯೆ

ಸಾರಾಂಶ

ಸಿಎಂ ಬದಲಿಸುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯ​ಕ​ರು| ಸಿಎಂ ಬದಲಾವಣೆ ಊಹಾಪೋಹ ಅಲ್ಲಗೆಳೆದ ಸಚಿವರು| ಸಿಎಂ ಯಡಿಯೂರಪ್ಪ ಅವರನ್ನ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ ಜೋಷಿ, ಸದಾನಂದಗೌಡರನ್ನು ಜಗದೀಶ್‌ ಶೆಟ್ಟರ್‌ ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ| 

ಬೆಂಗಳೂರು(ಸೆ.12): ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಆಗೊಮ್ಮೆ ಈಗೊಮ್ಮೆ ಹುಟ್ಟಿಕೊಳ್ಳುತ್ತಿರುವ ಊಹಾಪೋಹಗಳನ್ನು ಖಡಾಖಂಡಿತವಾಗಿ ಅಲ್ಲಗೆಳೆದಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥ‌ನಾರಾಯಣ, ಸಚಿವರಾದ ಸಿ.ಸೋಮಣ್ಣ, ಡಾ.ಕೆ.ಸುಧಾಕರ್‌ ಮತ್ತು ನಾಗೇಶ್‌, ಬಿ.ಎಸ್‌.ಯಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಸದಾನಂದಗೌಡರನ್ನು ಜಗದೀಶ್‌ ಶೆಟ್ಟರ್‌ ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ನಾಲ್ವರೂ ಅಭಿಪ್ರಾಯಪಟ್ಟಿದ್ದಾರೆ.

ಯಡಿಯೂರಪ್ಪನವರನ್ನು ಭೇಟಿಯಾಗಿದ್ಯಾಕೆ? ಕೊನೆಗೂ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಮಳವಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಾ.ಅಶ್ವತ್ಥ್‌ನಾರಾಯಣ, ರಾಜ್ಯ ಬಿಜೆಪಿ ನಾಯಕರು, ಸಚಿವರು ದೆಹಲಿಗೆ ಹೋದಾಗ ಮುಖ್ಯಮಂತ್ರಿಗಳ ಬದಲಾವಣೆ ನಡೆಯುತ್ತಿದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು. ಕೇಂದ್ರ ಸರ್ಕಾರದಿಂದ ರಾಜ್ಯಗಳಲ್ಲಿ ನಡೆಯಬೇಕಿರುವ ವಿವಿಧ ಇಲಾಖಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಲು ಸಚಿವರು ದೆಹಲಿಗೆ ತೆರಳಬೇಕಾಗುತ್ತದೆ. ಸಚಿವ ಜಗದೀಶ್‌ ಶೆಟ್ಟರ್‌ ಸಹ ಅದೇ ಕಾರಣಕ್ಕೆ ಹೋಗಿದ್ದಾರೆ ಎಂದರು. ಇದೇವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದನ್ನೂ ತಪ್ಪಾಗಿ ಅರ್ಥೈಸಿಕೊಳ್ಳುವುದು ಬೇಡ ಎಂದಿದ್ದಾರೆ.

ರಾಯಚೂರಿನಲ್ಲಿ ಬೈರತಿ ಬಸವರಾಜ್‌, ಹಾಸನದಲ್ಲಿ ಸೋಮಣ್ಣ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌, ಕೋಲಾರದಲ್ಲಿ ಎಚ್‌.ನಾಗೇಶ್‌ ಸಹ ಸುದ್ದಿಗಾರರ ಪ್ರಶ್ನೆಗಳಿಗೆ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ