
ಬೆಂಗಳೂರು (ಮಾ.25): ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾವ ಮಹಾನಾಯಕರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇಲ್ಲವೇ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನು ಸಿದ್ದರಾಮಯ್ಯ ಬಣ ನಿಯಂತ್ರಿಸುತ್ತಿದೆಯೇ? ಕೂಸು ಹುಟ್ಟುವ ಮುನ್ನವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣ ಕುಲಾವಿಗೆ ಹೊಡೆದಾಡುತ್ತಿರುವುದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕೊನೆಗೂ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಅಂತಿಮಗೊಳಿಸಿದೆ. ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಸೂಚ್ಯವಾಗಿ ತಿಳಿಸಿದೆ.
ಯಾರೇನೇ ಹೇಳಲಿ ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ; ಡಿಕೆಶಿ ಕೌಂಟರ್..! .
ಸಿದ್ದರಾಮಯ್ಯ ಬಣ ಡಿ.ಕೆ.ಶಿವಕುಮಾರ್ ಅವರಿಗೆ ಟ್ವೀಟ್ ಮೂಲಕ ಸ್ಪಷ್ಟಸಂದೇಶ ರವಾನಿಸಿದೆ. ಕನಕಪುರದ ಬಂಡೆ ಎಂದು ಮೆರೆಯುತ್ತಿದ್ದವರಿಗೆ ಡೈನಮೈಟ್ ಇಟ್ಟು ಉಡಾಯಿಸುವ ಮುನ್ಸೂಚನೆಯನ್ನು ಸಿದ್ದರಾಮಯ್ಯ ಬಣ ನೀಡುತ್ತಿದೆಯೇ? ಮಾಜಿ ಗೃಹ ಸಚಿವ ಪರಮೇಶ್ವರ ಅವರನ್ನು ಸೋಲಿಸಿದವರು ಈಗ ಪಕ್ಷದ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಶಿವಕುಮಾರ್ಗೆ ಸಂದೇಶ ಕಳುಹಿಸಿದ್ದಾರೆ. ವಲಸೆ ನಾಯಕರ ಮುಂದೆ ಮೂಲ ಕಾಂಗ್ರೆಸಿಗರು ಶರಣಾದರೇ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.