
ಬೆಂಗಳೂರು, (ನ.10) : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಮುಗಿದಿದೆ.
ಈ ಅಂಚೆ ಮತ ಎಣಿಕೆಯಲ್ಲಿ ಶಿರಾ ಹಾಗೂ ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಮುನಿರತ್ನ ಅವರಿಗೆ 253, ಕಾಂಗ್ರೆಸ್ ಅಭ್ಯರ್ಥಿ 115 ಹಾಗೂ ಜೆಡಿಎಸ್ನ ಕೃಷ್ಣಮೂರ್ತಿ ಅವರಿಗೆ 34 ಅಂಚೆ ಮತಗಳನ್ನ ಪಡೆದುಕೊಂಡಿದ್ದಾರೆ.
ಶಿರಾ ಬೈ ಎಲೆಕ್ಷನ್: ದೇವಿಯ ಪವಾಡ, ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು..!
ಇನ್ನು ಶಿರಾದಲ್ಲೂ ಸಹ ಬಿಜೆಪಿ ಅಭ್ಯರ್ಥಿ ಡಾ. ರಾಜೇಸ್ಗೌಡ 70 ಅಂಚೆ ಮತ ಪಡೆದುಕೊಂಡು ಮುನ್ನಡೆ ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ನ ಜಯಚಂದ್ರ ಅವರಿಗೆ 33 ಮತ್ತು ಜೆಡಿಎಸ್ನ ಅಮಾಜಮ್ಮಾ 15 ಅಂಚೆ ಮತಗಳನ್ನ ಪಡೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.