ಕೊಪ್ಪಳ: ಕಿವಿಗೆ ಹೂ ಇಟ್ಕೊಂಡು ನಗರಸಭೆ ಬಿಜೆಪಿ ಸದಸ್ಯನ ವಿನೂತನ ಪ್ರತಿಭಟನೆ

Published : Feb 28, 2023, 01:54 PM IST
ಕೊಪ್ಪಳ: ಕಿವಿಗೆ ಹೂ ಇಟ್ಕೊಂಡು ನಗರಸಭೆ ಬಿಜೆಪಿ ಸದಸ್ಯನ ವಿನೂತನ ಪ್ರತಿಭಟನೆ

ಸಾರಾಂಶ

ಏನು ಅಭಿವೃದ್ಧಿ ಮಾಡದೇ ನಮ್ಮ ಕಿವಿಯಲ್ಲಿ ಹೂ ಇಡುವ ಕೆಲಸ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ ನಗರಸಭೆ ಸದಸ್ಯ ಸೋಮಣ್ಣ ಹಳ್ಳಿ. ಎರಡೂ ಕಿವಿಯಲ್ಲಿ ಹೂ ಇಟ್ಟು ಕೊಂಡು ಸಭೆಯ ಮಧ್ಯದಲ್ಲಿ ಕುಳಿತು ಪ್ರತಿಭಟಿಸಿದ್ದಾರೆ. 

ಕೊಪ್ಪಳ(ಫೆ.28): ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ವಿಧಾನಸೌಧದಲ್ಲಿ ಬಜೆಟ್ ಮಂಡನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದು ಆಡಳಿತ ಪಕ್ಷವನ್ನು ಕಿಚಾಯಿಸಿದ್ದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಇಂದು(ಮಂಗಳವಾರ) ನಗರದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯನೋರ್ವ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದು ಅಚ್ಚರಿ ಮೂಡಿಸಿದ್ದಾರೆ. 

ಹೌದು, ಕೊಪ್ಪಳ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ್ ಸಹ ಕೈ ಪಡೆಯವರಾಗಿದ್ದಾರೆ. ಹೀಗಾಗಿ ಬಿಜೆಪಿ ಸದಸ್ಯರಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ನಗರದಲ್ಲಿ ಅಭಿವೃದ್ಧಿ ಎಂಬುದೇ ಇಲ್ಲ. ಏನಾಗಿದೆ ಅಭಿವೃದ್ಧಿ?, ಇನ್ನೇನು ವಿಧಾನಸಭಾ ಚುನಾವಣೆ ಬರುತ್ತದೆ. ಈ ಅವಧಿಯದ್ದು ನಗರಸಭೆದು ಕೊನೆ ಸಭೆ ಇದು. ಏನು ಅಭಿವೃದ್ಧಿ ಮಾಡದೇ ನಮ್ಮ ಕಿವಿಯಲ್ಲಿ ಹೂ ಇಡುವ ಕೆಲಸ ಮಾಡುತ್ತಿದ್ದೀರಿ ಎಂದು 16 ನೇ ವಾರ್ಡ್ ಸದಸ್ಯ ಸೋಮಣ್ಣ ಹಳ್ಳಿ ಕಿಡಿಕಾರಿದ್ದಾರೆ. ಇವರು ಎರಡೂ ಕಿವಿಯಲ್ಲಿ ಹೂ ಇಟ್ಟು ಕೊಂಡು ಸಭೆಯ ಮಧ್ಯದಲ್ಲಿ ಕುಳಿತು ಪ್ರತಿಭಟಿಸಿದ್ದಾರೆ. 

ಜನರ ಕಷ್ಟಜೆಡಿಎಸ್‌ನಿಂದ ಮಾತ್ರ ಪರಿಹಾರ

ಇದನ್ನು ನೋಡಿದ ಕೈ ಸದಸ್ಯರಾದ ಮಹೇಂದ್ರ ಚೋಫ್ರಾ, ಮುತ್ತು ಕುಷ್ಟಗಿ, ಅಮ್ಜದ್ ಪಟೇಲ್ ಸೇರಿದಂತೆ ಅನೇಕರು ನಗಲಾರಂಭಿಸಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿಯ ಅನೇಕ ಸದಸ್ಯರು ಕೈ ಸದಸ್ಯರ ನಡೆ ಖಂಡನಿಯ ಎಂದರು.

ಬಿಜೆಪಿ ಸದಸ್ಯೆ ವಿದ್ಯಾ ಹೆಸರೂರು, ಇದು ನಾಚಿಕೇಡಿತನದ ಸಂಗತಿ. ಅನುದಾನ ತಾರತಮ್ಯ ಖಂಡಿಸಿ ನಮ್ಮ ಸದಸ್ಯರು ವಿನೂತನವಾಗಿ ಪ್ರತಿಭಟಿಸಿದರೇ ನಗುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?