
ಬೆಂಗಳೂರು(ಆ.31): ಬಿಜೆಪಿ ಕಚೇರಿ ಗಾಸಿಪ್ ಕೇಂದ್ರ ಅಲ್ಲ ಎಂದು ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಬಿಜೆಪಿ ಕಚೇರಿ ಇರುವುದು ಪಕ್ಷದ ಸಂಘಟನೆಗಾಗಿ. ಗಾಸಿಪ್ಗಳೆಲ್ಲ ಸೃಷ್ಟಿಯಾಗುವುದು ಮನೆಯಲ್ಲಿ. ಅದಕ್ಕಾಗಿಯೇ ಬೇರೆ ಮನೆಗಳಿವೆ. ಆಯಾ ಮನೆಗಳಲ್ಲಿ ಗಾಸಿಪ್ಗಳು ಸೃಷ್ಟಿಯಾಗುತ್ತವೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯದಲ್ಲಿ ಅನಾಹುತ: ಹೊಸ ಬಾಂಬ್ ಸಿಡಿಸಿದ ಯತ್ನಾಳ್
‘ನಾನು ಕಾಂಗ್ರೆಸ್ ಸೇರುವೆ ಎಂದು ಎಲ್ಲೂ ಹೇಳಿಲ್ಲ. ಆದರೂ ನಾನು ಕಾಂಗ್ರೆಸ್ ಸೇರುವೆ ಎಂದು ಬಿಜೆಪಿ ಕಚೇರಿಯಿಂದಲೇ ನನ್ನ ಬಗ್ಗೆ ಅಪ್ರಚಾರ ಮಾಡಲಾಗುತ್ತಿದೆ’ ಎಂದು ರೇಣುಕಾಚಾರ್ಯ ಟೀಕಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.