ಸತೀಶ ಜಾರಕಿಹೊಳಿ ಅಂತ್ಯ ಕಾಲ ಸನ್ನಿಹಿತ: ಯತ್ನಾಳ

Published : Nov 17, 2022, 07:01 PM ISTUpdated : Nov 17, 2022, 07:59 PM IST
ಸತೀಶ ಜಾರಕಿಹೊಳಿ ಅಂತ್ಯ ಕಾಲ ಸನ್ನಿಹಿತ: ಯತ್ನಾಳ

ಸಾರಾಂಶ

ಶಾಸಕ ಸತೀಶ ಜಾರಕಿಹೊಳಿ ಕ್ಷೇತ್ರ ಬಿಹಾರ ರಾಜ್ಯದಂತೆ ಆಗಿದೆ. ನೀನು ಹ್ಯಾಂಗೆ ಗೋಕಾಕಗೆ ಬರುತ್ತಿಯಾ ಎಂದು ಹೇಳುವ ಮೂಲಕ ನನಗೆ ಸವಾಲು ಹಾಕಿದ್ದಕ್ಕೆ ಗೋಕಾಕಗೆ ತೆರಳಿದ್ದೆ ಎಂದ ಯತ್ನಾಳ 

ವಿಜಯಪುರ(ನ.17): ಶಾಸಕ ಸತೀಶ ಜಾರಕಿಹೊಳಿಗೆ ಅಂತ್ಯ ಕಾಲ ಸನ್ನಿಹಿತವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಾಸಕ ಸತೀಶ ಜಾರಕಿಹೊಳಿಗೆ ಅಂತ್ಯಕಾಲ ಬಂದಿದೆ. ಅದಕ್ಕಾಗಿಯೇ ಅವರು ಈ ರೀತಿ ಇತರರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ನನಗೆ ಗೋಕಾಕಗೆ ಬರಲು ಶಾಸಕ ಸತೀಶ ಜಾರಕಿಹೊಳಿ ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕಗೆ ಹೋಗಿದ್ದೆ. ಆ ಮತಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್‌ ಇಲ್ಲ ಎನ್ನುವ ರೀತಿಯಾಗಿತ್ತು. ಗೋಕಾಕನಲ್ಲಿ ಸತೀಶ ಜಾರಕಿಹೊಳಿ ಸಾಮ್ರಾಜ್ಯ ಆಗಿತ್ತು ಎಂದರು.

ಶಾಸಕ ಸತೀಶ ಜಾರಕಿಹೊಳಿ ಕ್ಷೇತ್ರ ಬಿಹಾರ ರಾಜ್ಯದಂತೆ ಆಗಿದೆ. ನೀನು ಹ್ಯಾಂಗೆ ಗೋಕಾಕಗೆ ಬರುತ್ತಿಯಾ ಎಂದು ಹೇಳುವ ಮೂಲಕ ನನಗೆ ಸವಾಲು ಹಾಕಿದ್ದಕ್ಕೆ ಗೋಕಾಕಗೆ ತೆರಳಿದ್ದೆ ಎಂದರು.

ಡಿ.12 ರೊಳಗಾಗಿ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲೇಬೇಕು: ಯತ್ನಾಳ

ಶಾಸಕ ಶಿವಾನಂದ ವಿರುದ್ಧ ವಾಗ್ದಾಳಿ:

ಇದೇ ಸಂದರ್ಭದಲ್ಲಿ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರ ವಿರುದ್ಧವೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಾಗ್ದಾಳಿ ನಡೆಸಿ, ಸಾಮರ್ಥ್ಯ ಇದ್ದರೆ ವಿಜಯಪುರ ನಗರ ಮತಕ್ಷೇತ್ರದಿಂದ ನಿಲ್ಲುವಂತೆ ಹೇಳಿದ್ದೇನೆ. ಶಾಸಕ ಶಿವಾನಂದ ಪಾಟೀಲ ಅವರ ಮುಸ್ಲಿಂ ಅಭಿಮಾನ ಎಲ್ಲಿ ಹೋಗಿದೆ? ಮುಸ್ಲಿಮರನ್ನು ಶಾಸಕರನ್ನಾಗಿ ಮಾಡುತ್ತೇನೆ ಎಂದಿದ್ದರು. ಈಗ ಅವರೇ ಟಿಕೆಟ್‌ ಕೇಳಿದ್ದಾರೆ. ಇದನ್ನು ಅವರೇ ಹೇಳಬೇಕು ಎಂದು ನುಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮತಕ್ಷೇತ್ರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತ್ನಾಳ, ಶ್ರೀ ಪಾದವೇ ಗತಿ ಎಂದು ಕೋಲಾರಕ್ಕೆ ಹೋಗಿದ್ದಾರೆ ಎಂದು ಹೇಳಿದರು.

ಬೇಡ ಜಂಗಮ ಮೀಸಲಾತಿ ಹೋರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬೇಡ ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬುವುದರ ಬಗ್ಗೆ ನಾನು ಮಾತನಾಡಲ್ಲ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್