
ಹಾವೇರಿ, (ಮಾ.27): ಬಿಜೆಪಿಯಲ್ಲೊಬ್ಬ ಯುವರಾಜ ಮತ್ತು ಕಾಂಗ್ರೆಸ್ ಮಹಾನಾಯಕ ಇಬ್ಬರೂ ಇದ್ದಾರೆಂದು ಹೇಳಿದ್ದೆ. ಈಗ ಕಾಂಗ್ರೆಸ್ ಮಹಾನಾಯಕನದ್ದು ಹೊರಬಂದಿದೆ. ಕೆಲವೆ ದಿನಗಳಲ್ಲಿ ಬಿಜೆಪಿಯ ಯುವರಾಜನದ್ದು ಹೊರಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮೊದಲೇ ಭವಿಷ್ಯ ನುಡಿದಿದ್ದೆ. ಈಗ ಕಾಂಗ್ರೆಸ್ ಮಹಾನ್ ನಾಯಕನ ಹೆಸರು ಹೊರಬಂದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜ್ನ ಹೆಸರು ಹೊರಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
'ಸಿಡಿ ಹಗರಣ 'ಹನಿಟ್ರ್ಯಾಪ್'ನಂತೆ ಕಾಣುತ್ತಿದೆ, ನಾಚಿಕೆ ಪಡುವಂತಾ ಸ್ಥಿತಿಯಲ್ಲಿ ರಾಜ್ಯ ನಿಂತಿದೆ'
ಈ ಸಿಡಿ ಯುವರಾಜನ ರಕ್ಷಣೆ ಮಾಡಲು ಸಿಸಿಬಿಗೆ ಕೊಟ್ಟಿದ್ದು. ಸಿಬಿಐಗೆ ಕೊಟ್ಟರೆ ಎಲ್ಲ ಕಳ್ಳರನ್ನ ಒದ್ದು ಒಳಗೆ ಹಾಕ್ತಾರೆ. ಐಪಿಎಸ್, ಐಎಎಸ್ ಅಧಿಕಾರಿಗಳು, ವ್ಯಾಪಾರಸ್ಥರು, ಶಾಸಕರು, ಸಂಸದರ ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದರು.
ಇವರಿಬ್ಬರೂ ಸಿಡಿ ಖರೀದಿದಾರರು. ಮೆಕ್ಕೆಜೋಳ, ಮೆಣಸಿನಕಾಯಿ ಖರೀದಿ ಮಾಡೋರ ರೀತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲೊಬ್ಬರು ಸಿಡಿ ಖರೀದಿ ಮಾಡೋರಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.