
ವಿಜಯಪುರ, (ಜ.13): ಮಂತ್ರಿ ಸ್ಥಾನ ಕೃತಪ್ಪಿದ್ದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳೆ ನಡೆಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪನವರ ನಾಯಕತ್ವದ ಬದಲಾವಣೆ ಎದ್ದಿದ್ದ ಕೂಗಿನ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಯಡಿಯೂರಪ್ಪರನ್ನ ಕೆಳಗಿಳಿಸಿದ್ರೆ ಕೇಂದ್ರ, ಅಮೀತ್ ಶಾ, ಪ್ರಧಾನಿ ವಿರುದ್ಧ ಬಂಡೆಳಲು ವೀರಶೈವ ಮಠಗಳು ಕೋಟಿ-ಕೋಟಿ ಪಡೆದಿವೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬಿಎಸ್ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ
2 ತಿಂಗಳ ಹಿಂದೆ ವೀರಶೈವ ಮಠಗಳಿಗೆ 83 ಕೋಟಿ ಹಂಚಲಾಗಿದೆ. ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ಬಂಡೆಳಲು ಸ್ವಾಮೀಜಿಗಳಿಗೆ ಈ ಹಣ ಸಂದಾಯವಾಗಿದೆ ಎಂದು ಹೊಸ ಬಾಂಬ್ ಸಿಡಿಸಿದರು,
ಗುಲ್ಬರ್ಗಾದಲ್ಲಿ ಒಬ್ಬ ಸ್ವಾಮೀಜಿಯಿಂದ ಈಗಾಗಲೇ ಯಡಿಯೂರಪ್ಪರನ್ನ ಕೆಳಗಿಳಿದ್ರೆ ಬಿಜೆಪಿ ಸರ್ವನಾಶವಾಗುತ್ತೆ ಎಂದು ಹೇಳಿದ್ದಾರೆ. ಹೀಗೆ ಹೇಳಿಕೆ ಕೊಡಿಸಲು ವೀರಶೈವ ಲಿಂಗಾಯತ ಸ್ವಾಮಿಗಳನ್ನು ಬಳಸಿಕೊಳ್ಳಲಾಗ್ತಿದೆ ಎಂದು ಯತ್ನಾಳ್ ಗುಡುಗಿದರು.
ಇನ್ನು ಪಂಚಮಸಾಲಿ ಸಮುದಾಯವನ್ನ ದುರುಪಯೋಗ ಪಡೆಸಿಕೊಳ್ಳಲಾಗ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಸಮುದಾಯವನ್ನ ಉಪಯೋಗಿಸಿಕೊಳ್ತಿದ್ದಾರೆ. ಪಂಚಮಸಾಲಿ ಸಮುದಾಯದ ಪಾದಯಾತ್ರೆ ಮೊಟಕುಗೊಳಿಸಲು ಹುನ್ನಾರ ನಡೆದಿದೆ ಎಂದು ಹೇಳಿದರು.
ಸಿಎಂ ಹಾಗೂ ಮಂತ್ರಿಯಾಗ್ತಿರೋ ನಮ್ಮ ಸಮುದಾಯದ ಇನ್ನೊಬ್ಬ ಸೇರಿ ಪಾದಯಾತ್ರೆ ರದ್ದಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಪರೋಕ್ಷವಾಗಿ ಮುರುಗೇಶ ನಿರಾಣಿ ವಿರುದ್ಧವು ವಾಗ್ದಾಳಿ ನಡೆಸಿದರು.
ಇಡೀ ವೀರಶೈವ ಸಮುದಾಯ ನನ್ನ ಬೆನ್ನಿಗಿದೆ ಎಂದು ಬಿಎಸ್ವೈ, ಕೇಂದ್ರ ಹೈಕಮಾಂಡ್ ನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಮರಕ ಸಂಕ್ರಾಂತಿಯ ಉತ್ತರಾಯಣದಿಂದ ಯಡಿಯೂರಪ್ಪ ಅವನತಿ ಆರಂಭ ಎಂದು ಭವಿಷ್ಯ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.