ಸದನಲ್ಲಿ ಸಿಎಂ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್, ಕೆರಳಿದ ರೇಣುಕಾಚಾರ್ಯ

Published : Mar 10, 2021, 02:32 PM ISTUpdated : Mar 10, 2021, 03:00 PM IST
ಸದನಲ್ಲಿ ಸಿಎಂ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್, ಕೆರಳಿದ ರೇಣುಕಾಚಾರ್ಯ

ಸಾರಾಂಶ

ಬಜೆಟ್ ಮೇಲಿನ ಅಧಿವೇಶನದಲ್ಲಿ ಇಂದು (ಬುಧವಾರ) ಬಿಜೆಪಿ ಪಕ್ಷದ ಶಾಸಕರುಗಳ ಮಧ್ಯೆಯೇ ಜಟಾಪಟಿ ನಡೆದಿರುವ ಪ್ರಸಂಗ ನಡೆದಿದೆ.

ಬೆಂಗಳೂರು, (ಮಾ.10): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಂದಿನಂತೆ ಬಜೆಟ್‌ ಮೇಲಿನ ಅಧಿವೇಶನದಲ್ಲಿ ತಮ್ಮ ಪಕ್ಷದ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಗುಡುಗಿದರು.

 ಮೀಸಲಾತಿ ವಿಚಾರ ಚರ್ಚೆಗೆ ಅವಕಾಶ ನೀಡುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯ ಮಾಡಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿರುವ ಘಟನೆ ಇಂದು (ಬುಧವಾರ) ಸದನದಲ್ಲಿ ನಡೆಯಿತು.

ಯತ್ನಾಳ್-ಬಿಎಸ್‌ವೈ ಮುಖಾಮುಖಿ: ಉಭಯ ನಾಯಕ ಮಧ್ಯೆ ನಡೀತು ಮಹತ್ವದ ಚರ್ಚೆ

ನಮ್ಮ ಸಮಾಜದ ಹೆಸರೇಳಿಕೊಂಡು ಮುಖ್ಯಮಂತ್ರಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ನಿನ್ನೆಯೇ ಸರ್ಕಾರ ಉತ್ತರ ಕೊಡುತ್ತದೆ ಎಂದು ಹೇಳಿದ್ದರೂ ಉತ್ತರ ಕೊಡಬೇಕಾದ ಸಿಎಂ ನಾಪತ್ತೆಯಾಗಿದ್ದಾರೆ ಎಂದರು.

ಮೀಸಲಾತಿ ವಿಚಾರ ಚರ್ಚೆಗೆ ಅವಕಾಶ ನೀಡುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ ಮನವಿಗೆ ನಂತರ ಅವಕಾಶ ನೀಡುತ್ತೇನೆ. ವಿರೋಧ ಪಕ್ಷದ ನಾಯಕರು ಮಾತನಾಡಿದ ಬಳಿಕ ನೀಡೋದಾಗಿ ಸ್ಪೀಕರ್ ಹೇಳಿದರು. ಇದಕ್ಕೆ ಒಪ್ಪದ ಯತ್ನಾಳ್​, ನೀವು ಕೊಟ್ಟಂತೆ ಮಾಡಿ ಮುಂದೂಡಿ ಹೋದರೆ ಹೇಗೆ? ಕೊಟ್ಟಂಗೂ ಆಗಬೇಕು, ಕೊಡದಂಗೂ ಆಗಬೇಕು ಅನ್ನೋ ಥರಾ ಆಗುತ್ತೆ ಎಂದು ಹೇಳಿ ಪ್ರತಿಭಟನೆ ನಡೆಸಲು ಮುಂದಾದರು. ಯತ್ನಾಳ್ ಅವರಿಗೆ ಸಾಥ್​ ಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯತ್ನಾಳ್​ಗೆ ಮಾತನಾಡಲು ಅವಕಾಶ ಕೊಡಿ ಎಂದರು. 

ಸಿದ್ದರಾಮಯ್ಯ ಅವರು ನಡೆಗೆ ಮೆಚ್ಚುಗೆ ಸೂಚಿಸಿದ ಯತ್ನಾಳ್, ವಿಪಕ್ಷ ‌ನಾಯಕ ಸಿದ್ದರಾಮಯ್ಯಗೆ ಪಂಚಮಸಾಲಿ ಸಮುದಾಯದ ಮೇಲೆ ಪ್ರೀತಿ ಇದೆ. ಹೀಗಾಗಿ ಅವರ ಸಮಯ ನಮಗೆ ಕೊಟ್ಟಿದ್ದಾರೆ. ಆದರೆ ಸರ್ಕಾರದಿಂದ ಉತ್ತರ ಕೊಡುವುದಾಗಿ ನಿನ್ನೆ ಹೇಳಿದ್ದ ಸಿಎಂ ಇಂದು ನಾಪತ್ತೆಯಾಗ್ತಾರೆ ಎಂದರೇ ಏನಿದು ವ್ಯವಸ್ಥೆ ಎಂದು ಪ್ರಶ್ನಿಸಿದರು.

ಯತ್ನಾಳ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಸಿಎಂ ಎಲ್ಲೂ ನಾಪತ್ತೆ ಆಗಿಲ್ಲ. ಅವರಿಗೂ ಪಂಚಮಸಾಲಿ ಸಮುದಾಯದ ಮೇಲೆ ಪ್ರೀತಿ ಇದೆ ಎಂದರು. ಇದಕ್ಕೆ ಪ್ರತ್ಯುತ್ತರ ನೀಡಿದ ಯತ್ನಾಳ್, ಅದನ್ನ ನೀವು ಹೇಳಬೇಡಿ, ಇದ್ದರೆ ಬರಬೇಕಿತ್ತು ಎಂದು ಟಾಂಗ್ ಕೊಟ್ಟರು.

ಆಯ್ತು ಬರ್ತಾರೆ ಎಂದು ರೇಣುಕಾಚಾರ್ಯ ಸಮಜಾಯಿಸಿ ನೀಡಿದರು. ಆ ಬಳಿಕ ಮೀಸಲಾತಿ ಹೋರಾಟದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಭಾಷಣ ಮಾಡಿದರು. ಪಂಚಮಸಾಲಿಗೆ 2A ಕೊಡ್ತೀರೋ ಇಲ್ವೋ ಎನ್ನುವುದನ್ನು ಸಿಎಂ ಹೇಳಲಿ. ಸಿಎಂ ಅವರ ಮನಸ್ಸಿನಲ್ಲಿ ಏನಿದೆ ಎಂದು ಹೇಳಲಿ ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ
ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ