
ವಿಜಯಪುರ, (ನ.09): ರಾಜ್ಯದಲ್ಲಿ ಕೋವಿಡ್ ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಮುಂದಾಗಿದೆ. ಇದಕ್ಕೆ ವಿಜಯಪುರ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಹಿಂದೂಗಳಿಗೆ ದೀಪಾವಳಿ, ದಸರಾ, ಗಣೇಶ ಹಬ್ಬಗಳಂದು ಸಾಮೂಹಿಕವಾಗಿ ಸೇರುತ್ತಾರೆ. ಆಗೆಲ್ಲ ಶಬ್ಧ ರಹಿತ ದೀಪಾವಳಿ, ಪರಿಸರ ಸ್ನೇಹಿ ಗಣೇಶೋತ್ಸವ ಎಂದೆಲ್ಲ ಬೋಧನೆ ಮಾಡಲಾಗುತ್ತದೆ. ಇದೇ ರೀತಿ ರಕ್ತರಹಿತ ಬಕ್ರೀದ್, ನಿಶಬ್ಧ ಶುಕ್ರವಾರ, ಪಟಾಕಿ ಇಲ್ಲದ ಡಿಸೆಂಬರ್ 31 ರಾತ್ರಿ ಜಾರಿಗೆ ಬರಲಿ. ಧ್ವನಿವರ್ಧಕ ಬಳಸಿ ಕೂಗುವ, ರಸ್ತೆಯಲ್ಲಿ ನಮಾಜು ಮಾಡುವುದು ಬೇಡ ಎಂದಿದ್ದಾರೆ.
ದೀಪಾವಳಿ ಹಬ್ಬ ಹೇಗೆ ಆಚರಣೆ ಮಾಡ್ಬೇಕು? ಸರ್ಕಾರದಿಂದ ಗೈಡ್ ಲೈನ್ಸ್
ನಾವು ಮನೆಯಲ್ಲೇ ದೀಪ ಹಚ್ಚುತ್ತೇವೆ. ಅವರು ಸ್ಪೀಕರ್ ಇಲ್ಲದೆ ನಮಾಜು ಮಾಡಲಿ, ರಸ್ತೆ ಮೇಲೆ ಬೇಡ ಎಂದೆಲ್ಲಾ ಸಲಹೆ ನೀಡುವ ಮೂಲಕ ದೀಪಾವಳಿ ಪಟಾಕಿ ನಿಷೇಧಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
Posted by B R Patil Yatnal on Sunday, November 8, 2020
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.