ಯಡಿಯೂರಪ್ಪಗೆ ವಯಸ್ಸಾಗಿದೆ ಎನ್ನುತ್ತಲೇ ಬೊಮ್ಮಾಯಿಗೂ ಟಾಂಗ್ ಕೊಟ್ಟ ಬಿಜೆಪಿ ಶಾಸಕ

Published : Mar 13, 2022, 06:30 PM ISTUpdated : Mar 13, 2022, 06:32 PM IST
ಯಡಿಯೂರಪ್ಪಗೆ ವಯಸ್ಸಾಗಿದೆ ಎನ್ನುತ್ತಲೇ ಬೊಮ್ಮಾಯಿಗೂ ಟಾಂಗ್ ಕೊಟ್ಟ ಬಿಜೆಪಿ ಶಾಸಕ

ಸಾರಾಂಶ

* ಯಡಿಯೂರಪ್ಪ, ಬೊಮ್ಮಾಯಿಗೆ ಟಾಂಗ್ ಕೊಟ್ಟ ಬಿಜೆಪಿ ಶಾಸಕ * ಯಡಿಯೂರಪ್ಪಗೆ ವಯಸ್ಸಾಗಿದೆ ಆರಾಮಾಗಿರ್ಬೇಕು, ಸುಖಾಸುಮ್ಮನೇ ಯಾಕೆ ಹೈರಾಣಾಗುತ್ತಾರೆ ಎಂದ ಯತ್ನಾಳ್ * ಬೊಮ್ಮಾಯಿ ಎರಡು ಕಡೆ ಸ್ಪರ್ಧೆ ಬಗ್ಗೆಯೂ ಟಾಂಗ್ 

ವಿಜಯಪುರ, (ಮಾ.13): ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪಗೆ ಶಾಸಕ ಬಸನಗೌಡ ಯತ್ನಾಳ್ ಟಾಂಗ್‌ ಕೊಟ್ಟಿದ್ದಾರೆ. 

ವಿಜಯಪುರದ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾ  ಇಂದು(ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಯಡಿಯೂರಪ್ಪಗೆ ವಯಸ್ಸಾಗಿದೆ ಇನ್ಮೇಲೆ ಆರಾಮಾಗಿರಬೇಕು. ಸುಖಾಸುಮ್ಮನೇ ಯಾಕೆ ಹೈರಾಣಾಗುತ್ತಾರೆ. ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿಗೆ 100-104 ಸೀಟ್‌ ಬರುತ್ತಿತ್ತು. ಪಕ್ಷದಲ್ಲಿ ಸೆಕೆಂಡ್ ಲೈನ್ ಲೀಡರ್ ಶಿಪ್ ಬಂದಿದೆ. ನಾವೆಲ್ಲಾ ಸೇರಿ 130 ಸೀಟ್ ದಾಟಿಸುತ್ತೇವೆ ಎಂದರು.

ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್‌ ಮುಕ್ತ ಮಾಡುತ್ತೇವೆ: ಬಿಎಸ್‌ ಯಡಿಯೂರಪ್ಪ

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ದೆಹಲಿಯ ಮಟ್ಟದಲ್ಲಿ ಏನು ನಡೆದಿದೆ ಎಂಬ ಬಗ್ಗೆ ಸುಳಿವಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ತಾರೆ. ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಯತ್ನಾಳ್ ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ 2 ಕ್ಷೇತ್ರಗಳಲ್ಲಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯಿಸಿದ್ದು, ಬಿಜೆಪಿಯಲ್ಲಿ ಒಬ್ಬರಿಗೆ ಎರಡು ಕ್ಷೇತ್ರಗಳಿಗೆ ಟಿಕೆಟ್ ಕೊಡಲ್ಲ. ಮೋದಿಗೆ ಒಮ್ಮೆ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶ ನೀಡಿದ್ದರು. ಇದನ್ನು ಬಿಟ್ಟರೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶ ನೀಡಿಲ್ಲ. ಸಿಎಂ ಬೊಮ್ಮಾಯಿ ಸಹ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಒಂದೇ ಕುಟುಂಬದವರು ಸಂಸದ, ಶಾಸಕ, ಜಿ.ಪಂ ಅಧ್ಯಕ್ಷರಾದ್ರೆ ಇವರ ಮನೆ ಮುಂದೆ ಕಾರ್ಯಕರ್ತರು ಗಂಟೆ ಹೊಡೆಯಬೇಕಾ? ಎಂದು ಪ್ರಶ್ನಿಸಿದರು.

ಗಾಂಧಿ ಕುಟುಂಬದ ರಾಜೀನಾಮೆ ಕೇವಲ ನಾಟಕ‌
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಹಿನ್ನೆಲೆ, ಸೋನಿಯಾಗಾಂಧಿ, ಪ್ರಿಯಾಂಕ ರಾಜೀನಾಮೆ ಸಲ್ಲಿಸಲಿರುವ ವಿಚಾರದ ಬಗ್ಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್ ನಾಯಕರೆಲ್ಲ ಅವರ ಕಾಲು ಹಿಡಿದು ರಾಜೀನಾಮೆ ಕೊಡಬೇಡಿ ಅನ್ನುತ್ತಾರೆ. ಅವರು ಚಿಂತನೆ ಮಾಡ್ತೀವಿ ಎಂದು ಮುಂದುವರೆಯುತ್ತಾರೆ ಎಂದು ಲೇವಡಿ ಮಾಡಿದರು.

ಇದು ರಾಜೀನಾಮೆ ಪ್ರಹಸನ ಅಷ್ಟೇ. ಹೀನಾಯವಾಗಿ ಸೋತಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ನಾಟಕ ಮಾಡ್ತಿದ್ದಾರೆ. ಗಾಂಧಿ ಕುಟುಂಬದ ರಾಜೀನಾಮೆ ಕೇವಲ ನಾಟಕ‌. ಸೋನಿಯಾ, ಪ್ರಿಯಾಂಕಾ, ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕರು. ಅವರು ಭಾಷಣ ಮಾಡಿದ್ರೆ ನಮಗೆ ಒದೊಂದು ಪರ್ಸಂಟ್ ಓಟು ಸಿಗುತ್ತೆ. ಬೇರೆಯವರಿಗೆ ಅಧ್ಯಕ್ಷರಾಗಲು ಆಸ್ಪದವೇ ಕೊಡುವುದಿಲ್ಲ ವ್ಯಂಗ್ಯವಾಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ