ಬಹಿರಂಗವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್: ಕಾರಣ?

Published : Oct 21, 2021, 03:35 PM IST
ಬಹಿರಂಗವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್: ಕಾರಣ?

ಸಾರಾಂಶ

* ಮತ್ತೆ ಅಳಲು ತೋಡಿಕೊಂಡ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್  * ಹಿಂದೂಗಳಾಗಿ ಹುಟ್ಟಿ, ಅವರಿಂದ ನಾವು ನೋವು ತಿನ್ನುತ್ತಿದ್ದೇವೆ ಎಂದು ಅಳಲು * ಇದರ ಜತೆಗೆ ಬಹಿರಂಗವಾಗಿ ಕ್ಷಮೆಯಾಚನೆ

ಬೆಂಗಳೂರು, (ಅ.21): ನಾವು ಮೂಲತಃ ಕ್ರಿಶ್ಚಿಯನ್ (christian)ಸಮುದಾಯವರ ವಿರೋಧಿಯಲ್ಲ. ಸರ್ಕಾರ ಕೂಡ ಅವರ ಪರವಾಗಿದೆ. ನಾನೂ ಕೂಡ ಅವರ ಪರವಾಗಿದ್ದೇನೆ. ಕ್ರೈಸ್ತ ಸಮಾಜ, ಮಿಶಿನರಿಗಳ ಪರವಾಗಿದ್ದೇವೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು ಬಿಜೆಪಿ (BJP) ಶಾಸಕ ಗೂಳಿಹಟ್ಟಿ ಶೇಖರ್(Gulihatti Shekar) ಹೇಳಿದರು.

ಇಂದು (ಅ.21) ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಬಲವಂತವಾಗಿ ಮತಾಂತರ ಮಾಡುತ್ತಾರೋ ಅವರ ವಿರುದ್ಧ ನಮ್ಮ ಸಮರ ನಡೆಯಲಿದೆ. ಕ್ರೈಸ್ತ ಸಮುದಾಯದವರು ಹೆದರುವ ಅವಶ್ಯಕತೆ ಇಲ್ಲ. ಅವರ ಭಾವನೆಗೆ ಧಕ್ಕೆ ತರುವ ಮಾತನ್ನು ಎಂದೂ ಆಡಿಲ್ಲ ಎಂದರು.

ಮತಾಂತರಗೊಂಡಿದ್ದ 4 ಕುಟುಂಬಗಳು ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಘರ್​ ವಾಪಸಿ

ಹಿಂದೂಗಳಾಗಿ (ಃಇನದು) ಹುಟ್ಟಿ, ಅವರಿಂದ ನಾವು ನೋವು ತಿನ್ನುತ್ತಿದ್ದೇವೆ. ನಾನು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಲ್ಲಿದ್ದೇನೆ. ಅಲ್ಲಿ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರತೀ ತಿಂಗಳು ಪರಿಶೀಲನಾ ಸಭೆ ಮಾಡುತ್ತೇವೆ. 75%ಹಿಂದುಳಿದವರಿದ್ದಾರೆ. ಹಿಂದುಳಿದವರ ಸಮುದಾಯದಲ್ಲಿ ಮುಸ್ಲಿಂ, ಸಿಖ್, ಪಾರ್ಸಿ ಎಲ್ಲರೂ ಬರುತ್ತಾರೆ. ಮುಸ್ಲಿಂ ಕಾರ್ಯಕ್ರಮದಲ್ಲಿ ಶಾದಿ ಮಾಲ್ ಸೇರಿದಂತೆ ಹಲವು ವಿಚಾರ ಚರ್ಚೆಗೆ ಬರಲಿದೆ. ಸಹಜವಾಗಿ ರಾಜ್ಯದಲ್ಲಿ ಎಷ್ಟು ಮಸೀದಿ, ಚರ್ಚ್ ಇದೆ ಅಂತ ಕೇಳಿದ್ದೇವೆ. ದರ್ಗಾ, ಚರ್ಚ್, ಸ್ಮಶಾನ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಹಾಗಾಗಿ ಕಮಿಟಿಯಲ್ಲಿ ವರದಿ ಕೇಳಿದ್ದೇವೆ. 1,700 ಚರ್ಚ್ ಇರುವುದಾಗಿ ಮಾಹಿತಿ ನೀಡಿದ್ದಾರೆ. ಚರ್ಚ್ ವರದಿ ಕೇಳಿರುವುದು ಸರ್ವೆ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸಂವಿಧಾನ, ಕಾನೂನಿನಲ್ಲಿ ಸ್ವ ಇಚ್ಛೆಯಿಂದ ಯಾವುದೇ ಧರ್ಮ ಪಾಲನೆಗೆ ಅವಕಾಶ ಇದೆ. ಬಲವಂತವಾಗಿ ಮತಾಂತರ ಪ್ರಕರಣ ಬಗ್ಗೆ ಹೋಮ್ ಡಿಪಾರ್ಟ್‌ಮೆಂಟ್ ಗೆ ಮಾಹಿತಿ ಕೇಳಿದ್ದೇವೆ. 37 ಪ್ರಕರಣಗಳು ದಾಖಲಾಗಿರುವುದಾಗಿ ಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಗೂಳಿಹಟ್ಟಿ ಶೇಖರ್ ಹೇಳಿದರು.

ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

ನನ್ನ ಹೆತ್ತ ತಾಯಿಯೇ ಮತಾಂತರ ಆಗಿದ್ದಾರೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭೆಯಲ್ಲಿ ನೋವು ತೋಡಿಕೊಂಡಿದ್ದರು.
 ಹೊಸದುರ್ಗ ಕ್ಷೇತ್ರದಲ್ಲಿ18-20 ಸಾವಿರ ಜನರನ್ನು ಮತಾಂತರ ಮಾಡಲಾಗಿದೆ.‌ ನನ್ನ ಹೆತ್ತ ತಾಯಿಯನ್ನು ಕೂಡಾ ಮತಾಂತರ ಮಾಡಲಾಗಿದೆ. ಕ್ರಿಶ್ಚಿಯನ್ ಮಿಷನರಿಗಳಲ್ಲಿ ಬ್ರೈನ್ ವಾಷ್ ಮಾಡಲಾಗ್ತಿದೆ ಎಂದು ಆರೋಪಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ