ಖಾತೆ ಕ್ಯಾತೆ: ಸಚಿವರಿಗೆ ದಿಲ್ಲಿಯಿಂದಲೇ ಒಂದು ಮನವಿ ಮಾಡಿದ ಬಿಜೆಪಿ ನಾಯಕ

Published : Aug 11, 2021, 04:20 PM ISTUpdated : Aug 11, 2021, 04:25 PM IST
ಖಾತೆ ಕ್ಯಾತೆ: ಸಚಿವರಿಗೆ ದಿಲ್ಲಿಯಿಂದಲೇ ಒಂದು ಮನವಿ ಮಾಡಿದ ಬಿಜೆಪಿ ನಾಯಕ

ಸಾರಾಂಶ

* ಸಚಿವ ಆನಂದ್ ಸಿಂಗ್ ಖಾತೆ ಕ್ಯಾತೆ ವಿಚಾರ * ಮಂತ್ರಿಗಳಾಗಿರುವವರಿಗೆ ಒಂದು ಮನವಿ ಮಾಡಿದ ಬಿಜೆಪಿ ನಾಯಕ * ನವದೆಹಲಿಯಿಂದ ನೂತನ ಸಚಿವರಿಗೆ ಹಿರಿಯ ನಾಯಕ ಕಿವಿಮಾತು

ನವದೆಹಲಿ, (ಆ.11): ದೊಡ್ಡ ಖಾತೆ ಮೇಲೆ ಕಣ್ಣಿಟ್ಟಿದ್ದ ಸಚಿವ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ನೀಡಿರೋದು ಅವರ ಅಸಮಾದಾನಕ್ಕೆ ಕಾರಣವಾಗಿದೆ.  ಈ ಖಾತೆಯನ್ನು ಒಪ್ಪಿಕೊಳ್ಳಲು ಸುತಾರಾಂ ಒಪ್ಪದ ಆನಂದ್​ ಸಿಂಗ್​ ರಾಜೀನಾಮೆ ನೀಡಲು ಚಿಂತೆನ ನಡೆಸಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚನಲ ಮೂಡಿಸಿದೆ.

ಇನ್ನು ಈ ಬಗ್ಗೆ ದೆಹಲಿಯಲ್ಲಿ ಇಂದು (ಆ.11) ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ಪ್ರತಿಕ್ರಿಯಿಸಿ, ಮಂತ್ರಿಗಳಾಗಿರುವವರಿಗೆ ಒಂದು‌ ವಿನಂತಿ. ಎಲ್ಲಾ ಖಾತೆಗಳು ಒಳ್ಳೆಯ ಖಾತೆಗಳು. ಕೊಟ್ಟ ಖಾತೆ ಎಷ್ಟು ಚನ್ನಾಗಿ ನಿಭಾಯಿಸಬಹುದು ಎನ್ನುವ ಕಡೆ ನೋಡಿ ಎಂದು ಕಿವಿ ಮಾತು ಹೇಳಿದರು.

ಸಚಿವ ಆನಂದ್ ಸಿಂಗ್ ರಾಜೀನಾಮೆ? ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ

ಎಲ್ಲಾ ಖಾತೆಗಳು ಒಳ್ಳೆಯ ಖಾತೆಗಳು. ಕೊಟ್ಟ ಖಾತೆ ಎಷ್ಟು ಚನ್ನಾಗಿ ನಿಭಾಯಿಸಬಹುದು ಎನ್ನುವ ಕಡೆ ನೋಡಿ. ಸಮಯ ತುಂಬಾ ಕಡಿಮೆ ಇದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸಚಿವರು ಇಲಾಖೆಯ ಭಾಗ ಅಲ್ಲ ಬದಲಿಗೆ ಸರ್ಕಾರದ ಭಾಗ. ಕೊಟ್ಟ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು. ಸಿಎಂ ಬೊಮ್ಮಾಯಿ ಎಲ್ಲರಿಗೂ ಗೌರವ ಕೊಡ್ತಾರೆ ಎಂದು ಸಲಹೆ ನೀಡಿದರು.

ಇನ್ನು ಈ ಹಿಂದಿನ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವಿಶ್ವನಾಥ್ ಇದೀಗ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಒಳ್ಳೆ ಸರ್ಕಾರ ನೀಡಲಿ. 20 ತಿಂಗಳು ಉತ್ತಮ ಆಡಳಿತ ನೀಡುವ ನಿರೀಕ್ಷೆ ಇದೆ. ನಾನು ಬಂಡಾಯಗಾರಾದ ರಮೇಶ್ ಜಾರಕಿಹೋಳಿ, ಸಿ.ಪಿ ಯೋಗೇಶ್ವರ್ ಜೊತೆಗಿಲ್ಲ. ಬೊಮ್ಮಾಯಿ ಗೆ ನನ್ನ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್