
ಬೆಂಗಳೂರು (ಆ.19): ಹೈದರಾಬಾದ್ ಕರ್ನಾಟಕದಲ್ಲಿನ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ಸಿದ್ಧರಾಗಿದ್ದು, ಅವರೆಲ್ಲರೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಘರ್ ವಾಪಸಿ ಮಾಡಲು ಹೋದರೆ ಬಿಜೆಪಿ ಮತ್ತು ಜೆಡಿಎಸ್ನ ಅರ್ಧದಷ್ಟು ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಆಪರೇಷನ್ ಹಸ್ತ ತಡೆಗೆ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಮತ್ತಷ್ಟುಚರ್ಚೆಗೆ ಕಾರಣವಾಗಿದೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಯಾವುದೇ ಕಂಡಿಷನ್ ಇಲ್ಲದೆ ಕಾಂಗ್ರೆಸ್ಗೆ ಬಂದರೆ ಅವರಿಗೆ ಸ್ವಾಗತ ಕೋರಲಾಗುವುದು. ನಾವು ಆಪರೇಷನ್ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ, ಜೆಡಿಎಸ್ ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರ ಅಸ್ತಿತ್ವ ಏನು ಎನ್ನುವುದನ್ನು ಜನರೇ ತೋರಿಸಿದ್ದಾರೆ ಎಂದು ತಿಳಿಸಿದರು.
ಸಚಿವ ಚೆಲುವರಾಯಸ್ವಾಮಿ ಅವರ ಬಳಿ ಕೆಲವರು ಸಂಪರ್ಕದಲ್ಲಿರಬಹುದು. ಹೈದರಾಬಾದ್ ಕರ್ನಾಟಕ ಭಾಗದ ಹಲವು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಅವರ ಅಸ್ತಿತ್ವ ಕಾಪಾಡಿಕೊಂಡು ಹೋದರೆ ಸಾಕು. ಘರ್ ವಾಪಸಿ, ಆಪರೇಷನ್ ಹಸ್ತ ಅಂತ ಹೋದರೆ ಬಿಜೆಪಿ ಮತ್ತು ಜೆಡಿಎಸ್ನ ಅರ್ಧದಷ್ಟುಶಾಸಕರು ಖಾಲಿಯಾಗುತ್ತಾರೆ ಎಂದರು.
ಕಾವೇರಿ ಸಮಸ್ಯೆ ಕೇವಲ ರಾಜಕೀಯ ಹೋರಾಟವಲ್ಲ: ಸಂಸದೆ ಸುಮಲತಾ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಈಗ ನಾಯಕರಾಗಲು ಯಾರೂ ತಯಾರಿಲ್ಲ. ಚುನಾವಣೆಗೂ ಮುನ್ನ ಯಡಿಯೂರಪ್ಪ ಅವರನ್ನೇ ನಾಯಕರನ್ನಾಗಿಸಿದ್ದರೆ ಹಲವು ನಾಯಕರು ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಸೇರುತ್ತಿರಲಿಲ್ಲ. ಚುನಾವಣೆ ಬಂದಾಗ ಮಾತ್ರ ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಅವರ ನೆನಪಾಗುತ್ತದೆ. ಅವರ ಹೆಗಲ ಮೇಲೆ ಕೈ ಹಾಕಿ ಮಾತನಾಡುತ್ತಾರೆ. ಯಡಿಯೂರಪ್ಪ ಅವರಿಗೆ ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದನ್ನು ಎಲ್ಲರೂ ನೋಡಿದ್ದಾರೆ. ಬಿಜೆಪಿ ಈಗ ಮುಳುಗುತ್ತಿರುವ ಹಡಗು ಅಷ್ಟೇ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.