ಭಿನ್ನಮತ ಹೆಚ್ಚಾಗುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತ ಮಹೇಶ್​​ ಕುಮಟಳ್ಳಿಗೆ ಬಂಪರ್ ಆಫರ್..!

Published : Jun 02, 2020, 05:05 PM ISTUpdated : Jun 02, 2020, 07:02 PM IST
ಭಿನ್ನಮತ ಹೆಚ್ಚಾಗುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತ ಮಹೇಶ್​​ ಕುಮಟಳ್ಳಿಗೆ ಬಂಪರ್ ಆಫರ್..!

ಸಾರಾಂಶ

ಕೊರೋನಾ ಭೀತಿ ಮಧ್ಯೆ ರಾಜ್ಯ ಬಿಜೆಯಲ್ಲಿ ರಾಜಕೀಯ ಗರಿಗೇದರಿದ್ದು, ಬಿಎಸ್‌ವೈ ವಿರುದ್ಧ ಅತೃಪ್ತರು ಬಂಡಾಯ ಬಾವುಟ ಹಾರಿಸಿದ್ದಾರೆ.  ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಮಹೇಶ್​​ ಕುಮಟಳ್ಳಿಗೆ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಂಪರ್ ಆಫರ್ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.02): ಸಚಿವ ಸ್ಥಾನ ವಂಚಿತ ಮಹೇಶ್​​ ಕುಮಟಳ್ಳಿ ಅವರನ್ನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಕುರಿತಂತೆ ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ ಲಕ್ಷ್ಮಣ್ ಇಂದು (ಮಂಗಳವಾರ) ಆದೇಶ ಹೊರಡಿಸಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಮಧ್ಯೆ ಎರಡು ಹೊಸ ಜಿಲ್ಲಾ ಉಸ್ತುವಾರಿಗಳ ನೇಮಕ

ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಅಧಿನಿಯಮ 1973ರ ಕಲಂ 34(2)(ಎ) ಅನ್ವಯ ವಿಧಾನ ಸಭಾ ಸದಸ್ಯರಾದ ಮಹೇಶ್ ಈರನಗೌಡ ಕುಮಠಳ್ಳಿ ಇವರನ್ನು ತಕ್ಷಣಿದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಆದೇಶಿಸಿದ್ದಾರೆ.

"

ಇನ್ನೊಂದೆಡೆ ಇದೇ ಸಂದರ್ಭದಲ್ಲಿ ದಿಢೀರ್ ಎರಡು ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿರುವುದು ಹಲವು ರಾಜಕೀಯ ಲೆಕ್ಕಾಚಾರಗಳ ಆರಂಭಕ್ಕೆ ಕಾರಣವಾದೆ.

ಈ ಹಿಂದೆ ಮಹೇಶ್ ಕುಮಟಳ್ಳಿ ಸಚಿವ ಸ್ಥಾನ ನೀಡಲೇಬೇಕೆಂದು ಸಿಎಂ ಎದುರು ಪಟ್ಟು ಹಿಡಿದಿದ್ದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.ಬಳಿಕ ಅವರನ್ನ ಎಂಎಸ್‍ಐಎಲ್ ಅಧ್ಯಕ್ಷರಾಗಿ ಮಾಡಲಾಗಿತ್ತು.

ಇದರಿಂದ ಬೇಸರಗೊಂಡಿರುವ ಕುಮಟಳ್ಳಿ, ಪಕ್ಷದ ನಿರ್ಧಾರದಿಂದ ಬೇಸರವವಾಗಿದೆ. ಆದರೆ, ಆ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ