
ಬೆಳಗಾವಿ, (ಮಾ.05): ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸದ್ದು ಜೋರಾಗಿದ್ದು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ.
"
ಯುವತಿಗೆ ಸರ್ಕಾರಿ ಕೆಲಸ ಆಮಿಷ ತೋರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಸಂತ್ರಸ್ತೆ ಹಾಗೂ ಅವರ ಕುಟುಂಬದ ಸದಸ್ಯರು ಈ ಬಗ್ಗೆ ಒಂದೇ ಒಂದು ಹೇಳಿಕೆ ಕೊಟ್ಟಿಲ್ಲ. ದೂರು ನೀಡಿಲ್ಲ. ಬದಲಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕಬ್ಬನ್ ಪೊಲಿಸ್ ಠಾಣೆ ದೂರು ನೀಡಿದ್ದು, ವಿಡಿಯೋ ಅಪ್ಲೋಡ್ ಆಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
'ಜಾರಕಿಹೊಳಿ ರಾಸಲೀಲೆಯಲ್ಲಿ ದೊಡ್ಡ ದೊಡ್ಡವರ ಕೈವಾಡ, 5 ಕೋಟಿ ಡೀಲ್ '
ಇದರ ಮಧ್ಯೆ ಇತ್ತ ಅವರ ಆಪ್ತ ಶಾಸಕರೊಬ್ಬರು, ರಮೇಶ್ ರಾಸಲೀಲೆ ವೀಡಿಯೋದಲ್ಲಿ ಮಚ್ಚೆ ಹುಡುಕಿದ್ದಾರೆ. ಈ ಮೂಲಕ ಸೆಕ್ಸ್ ಸಿಡಿಯಲ್ಲಿ ತನ್ನ ಆಪ್ತ ರಮೇಶ್ ಜಾರಕಿಹೊಳಿಯ ಮುಖದಲ್ಲಿದ್ದಂತ ಮಚ್ಚೆಯೇ ಇಲ್ಲ ಎಂದು ಶಾಸಕ ಮಹೇಶ್ ಕುಮಟವಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ತಮ್ಮ ಆಪ್ತರಾದ ರಮೇಶ್ ಜಾರಕಿಹೊಳಿಯವರ ಮನೆಗೆ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಘಟನೆ ಬಗ್ಗೆ ಮಾತುಕತೆ ನಡೆಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯ ಬಗ್ಗೆ ಬಿಡುಗಡೆ ಮಾಡಿದ ರಾಸಲೀಲೆ ವೀಡಿಯೇದಲ್ಲಿ, ರಮೇಶ್ ಜಾರಕಿಹೊಳಿ ಮುಖದಲ್ಲಿ ಇರುವ ಮಚ್ಚೆ ಇಲ್ಲ. ಈ ವೀಡಿಯೋ ಎಡಿಟ್ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಒಂದೊಂದು ಸಾಕ್ಷ್ಯಾಧಾರಗಳು ಬಹಳ ಮುಖ್ಯವಾಗಿದ್ದು, ಈ ಮಚ್ಚೆ ವಿಚಾರದ ಬಗ್ಗೆ ಸಹ ತನಿಖೆಯಲ್ಲಿ ಪ್ರಮುಖ ಅಂಶವಾಗಬಹುದು.
ಇನ್ನು ವೈಷಮ್ಯದಿಂದ ರಮೇಶ್ ಜಾರಕಿಹೊಳಿ ಮೇಲೆ ಈ ರೀತಿ ಸೇಡು ತೀರಿಸಿಡ್ರಾ? ಹಾಗಿದ್ದರೆ ಇದರ ಹಿಂದೆ ಯಾರ ಷಡ್ಯಂತ್ರ ಇದೆ? ಇದು ಪಕ್ಕಾ ಪ್ಲಾನ್ ಮಾಡಿ ಮಾಡಿರುವುದಾ ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿದ್ದು, ತನಿಖೆ ಬಳಿಕೆ ಸತ್ಯಾಸತ್ಯತೆ ಹೊರಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.