ಓಡಿಬಂದು ಮದ್ವೆಯಾದ ಜೋಡಿ: ಇಬ್ಬರ ಮನೆಯವರನ್ನೂ ಒಪ್ಪಿಸಿ ಹರಸಿದ ರೇಣುಕಾಚಾರ್ಯ

Published : Mar 06, 2021, 07:56 PM ISTUpdated : Mar 06, 2021, 08:15 PM IST
ಓಡಿಬಂದು ಮದ್ವೆಯಾದ ಜೋಡಿ: ಇಬ್ಬರ ಮನೆಯವರನ್ನೂ ಒಪ್ಪಿಸಿ ಹರಸಿದ ರೇಣುಕಾಚಾರ್ಯ

ಸಾರಾಂಶ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಮತ್ತೆ ಸುದ್ದಿಯಾಗಿದ್ದಾರೆ.

ದಾವಣಗೆರೆ, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ  ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮನೆ ಬಿಟ್ಟು ಓಡಿ ಬಂದು ಮದುವೆಯಾದ ಪ್ರೇಮಿಗಳಿಗೆ ಹರಸುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು...ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುಂಕುವ ಗ್ರಾಮದ ಶಿವಕುಮಾರ್, ಭೂಮಿಕಾ ಎನ್ನುವ ಜೋಡಿ ಹೊನ್ನಾಳಿ ತಾಲೂಕಿನ  ಹಿರೇಕಲ್ಮಠದಲ್ಲಿ ಮದುವೆ ಮಾಡಿಕೊಂಡಿದ್ದಾರೆ. ಆದ್ರೆ, ಇಬ್ಬರು ಮನೆಯವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಜೋಡಿ ರೇಣುಕಾಚಾರ್ಯ ಮೊರೆ ಹೋಗಿದೆ. 

ಬಳಿಕ ಅವರೇ ಇಬ್ಬರ ಮನೆಯವರುಗೂ ಕರೆ ಮಾಡಿ ವಿಷಯ ತಿಳಿಸಿ ಇಬ್ಬರ ಮನೆಯವರನ್ನೂ ಒಪ್ಪಿಸಿದ್ದು,ನಿಮ್ಮ ಅಪ್ಪ ನನ್ನ ಸ್ನೇಹಿತ, ನೀವು ಚೆನ್ನಾಗಿ ನೋಡಿಕೊಳ್ಳಬೇಕು. ನಿಮ್ಮ ತಂದೆ, ತಾಯಿಗಳನ್ನು ನೀವು ಚೆನ್ನಾಗಿ ನೋಡಿಕೊಳ್ಳಬೇಕು. ನೀನು ಹುಡುಗಿಯನ್ನು ಚೆನ್ನಾಗಿ ನೋಡಬೇಕೆಂದು ಬುದ್ಧಿವಾದ ಹೇಳಿ ಶುಭ ಹಾರೈಸಿದರು. 

ಟೆಸ್ಟ್‌ ಫೈನಲ್‌ಗೆ ಕೊಹ್ಲಿ ಬಾಯ್ಸ್, ತೈಲ ಬೆಲೆ ಇಳಿಕೆಗೆ ಸೌದಿ ಟಿಪ್ಸ್; ಮಾ.6ರ ಟಾಪ್ 10 ಸುದ್ದಿ!

ಈ ಬಗ್ಗೆ ಸ್ವತಃ ರೇಣುಕಾಚಾರ್ಯ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ