ಕೆಲ ಸಚಿವರ ದುರಹಂಕಾರ ಸಹಿಸಿಕೊಳ್ಳಲು ಆಗ್ತಿಲ್ಲ: ಮತ್ತೆ ಗುಡುಗಿದ ರೇಣುಕಾಚಾರ್ಯ

Published : Feb 28, 2021, 08:13 PM IST
ಕೆಲ ಸಚಿವರ ದುರಹಂಕಾರ ಸಹಿಸಿಕೊಳ್ಳಲು ಆಗ್ತಿಲ್ಲ: ಮತ್ತೆ ಗುಡುಗಿದ ರೇಣುಕಾಚಾರ್ಯ

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಕೆಲ ಸಚಿವರ ನಡೆಗೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ದಾವಣಗೆರೆ, (ಫೆ.28): ಮಿನಿಸ್ಟರ್ ಅಂದ್ರೆ ದೇವಕೋಕದಿಂದ ಇಳಿದು ಬಂದವರಾ ಎಂದು ಹೊನ್ನಾಳಿ ಬಿಜೆಪಿ ಶಾಸಕರು ಎಂ.ಪಿ, ರೇಣುಕಾಚಾರ್ಯ ಅವರು  ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರಿದ್ದರು.

ಇದೀಗ ಮತ್ತೆ ಕೆಲ ಸಚಿವ ನಡೆಗೆ ರೇಣುಕಾಚಾರ್ಯ ಕೆಂಡಾಮಂಡಲರಾಗಿದ್ದು, ಕೆಲವು ಸಚಿವರ ದುರಹಂಕಾರ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಮಾತನಾಡ್ತೇನೆ ಎಂದು  ವಿರುದ್ಧ ಗುಡುಗಿದ್ದಾರೆ.

ಮಿನಿಸ್ಟರ್ ಅಂದ್ರೆ ದೇವಲೋಕದಿಂದ ಇಳಿದು ಬಂದವರಾ?: ಸುಧಾಕರ್‌ ವಿರುದ್ಧ ಬಿಜೆಪಿ ಶಾಸಕ ವಾಗ್ದಾಳಿ

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು.. ಬಿಜೆಪಿ ಒಳ್ಳೆಯ ಆಡಳಿತ ನೀಡಲಿ ಅನ್ನೋದು ಜನರ ಬಯಕೆ ಆಗಿದೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಆದರೆ ಕ್ಯಾಬಿನೆಟ್ ಕೆಲವು ಸರಿಯಿಲ್ಲ ಎಂದು ಆರೋಪಿಸದರು. 

ಸಚಿವ ಸಂಪುಟದಲ್ಲಿ ಕೆಲವು ಸಚಿವರ ದುರಹಂಕಾರ, ಅವರ ವರ್ತನೆಗಳು, ಸರ್ವಾಧಿಕಾರ ತೋರುತ್ತಿದ್ದಾರೆ. ಬೇರೇ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರಿಗೆ ಕಳಕಳಿ ಇಲ್ಲ. ಜನರು ಅಧಿಕಾರ ಕೊಟ್ಟಿದ್ದು ಜನರ ಸೇವೆಗೆ, ಲಾಭದಾಯಕ ಹುದ್ದೆ ಪಡೆಯೋದಕಲ್ಲ ಎಂದು ಕಿಡಿಕಾರಿದರು.

ಈ ಸರ್ಕಾರ ಬರೋಕೆ ಒಬ್ಬಿಬ್ಬರ ಪಾತ್ರ ಇಲ್ಲ. ರೇಸಾರ್ಟ್​ನಲ್ಲಿ ಈ ಬಗ್ಗೆ ನಾನು ಹಮಾಲಿ ಮಾಡಿದ್ದೇನೆ. ಯಡಿಯೂರಪ್ಪ ವರ್ಚಸ್ಸು, ಮೋದಿ ವರ್ಚಸ್ಸು ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಪರೋಕ್ಷವಾಗಿ ವಲಸೆ ನಾಯಕರಿಗೆ ರೇಣುಕಾಚಾರ್ಯ ಟಾಂಗ್ ಕೊಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಜನಪ್ರಿಯತೆ ಸಹಿಸಲು ಸಂಕಷ್ಟ: ಬಿ.ವೈ.ವಿಜಯೇಂದ್ರ