ನಾನು ತಪ್ಪು ಮಾಡಿದ್ರೆ ನೇಣಿಗೇರಿಸಲಿ: ಮತ್ತೆ ಅಬ್ಬರಿಸಿದ ರೇಣುಕಾಚಾರ್ಯ

Published : Apr 12, 2020, 06:40 PM IST
ನಾನು ತಪ್ಪು ಮಾಡಿದ್ರೆ ನೇಣಿಗೇರಿಸಲಿ: ಮತ್ತೆ ಅಬ್ಬರಿಸಿದ ರೇಣುಕಾಚಾರ್ಯ

ಸಾರಾಂಶ

ಕೊರೋನಾ ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ  ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಅಬ್ಬರಿಸಿದ್ದಾರೆ.

ಬೆಂಗಳೂರು, (ಏ.12): ಚಿಕಿತ್ಸೆಗೆ ಸ್ಪಂದಿಸದೇ ಇದ್ರೆ ತಬ್ಲಿಘಿಗಳನ್ನು ಗುಂಡಿಕ್ಕಿ ಕೊಂದ್ರು ತಪ್ಪಲ್ಲ ಎಂಬ ಹೇಳಿಕೆಯನ್ನು  ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

ನಾನು ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಿ ನೇಣಿಗೇರಿಸಲಿ ಎಂದು ರೇಣುಕಾಚಾರ್ಯ ತಮ್ಮ ಹಳೆ ಹೇಳಿಕೆಯನ್ನು  ಟ್ವಿಟ್ಟರ್‌ನಲ್ಲಿ ಸ್ಮಮರ್ಥಿಸಿಕೊಂಡಿದ್ದಾರೆ.

'ಆಸ್ಪತ್ರೆಗೆ ಬರದೇ ತಲೆಮರೆಸಿಕೊಂಡಿರುವ ತಬ್ಲಿಘಿಗಳನ್ನು ಗುಂಡಿಕ್ಕಿ ಕೊಂದರೂ ತಪ್ಪಿಲ್ಲ' 

ಮುಸ್ಲಿಂ ಸಮುದಾಯದ ಮೇಲೆ ಅವಹೇಳನ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ತಬ್ಲೀಘಿ ಜಮಾತ್ ನಲ್ಲಿ ಪಾಲ್ಗೊಂಡು ವಾಪಸ್ ಬಂದ ಮುಸ್ಲಿಮರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸದವರು ದೇಶ ದ್ರೋಹಿಗಳು. ಚಿಕಿತ್ಸೆಗೆ ಸ್ಪಂದಿಸದೆ ಕದ್ದು ಮುಚ್ಚಿ ಒಡಾಡುವರನ್ನ ಗಂಡಿಕ್ಕಿ ಕೊಲ್ಲಿ ಎಂದು ರೇಣುಕಾಚಾರ್ಯ ಗುಡುಗಿದ್ದರು.

ಇದು ಭಾರೀ ವಿವಾದ ಸೃಷ್ಟಿಸಿತ್ತು. ಅಲ್ಲದೇ  ರೇಣುಕಾಚಾರ್ಯ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸುವಂತೆ ಸಿಎಂ ಬಿಎಸ್‌ವೈಗೆ ಒತ್ತಾಯಿಸಿದ್ದರು.

ಇದೀಗ ಕಾಂಗ್ರೆಸ್‌ ನೀಡಿರುವ ದೂರಿನ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ನಾನು ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಲಿ ನೇಣೆಗೇರಿಸಲಿ.

KPCC ರಾಜ್ಯ ಘಟಕದ ವತಿಯಿಂದ ರಾಜ್ಯದ ಪೋಲಿಸ್ ವರಿಷ್ಠಾದಿಕಾರಿಗೆ ನನ್ನ ವಿರುದ್ದ ದೂರು ದಾಖಲಿಸಿ ಬಂಧಿಸಿಬೆಕೆಂದು ಹೇಳಿದ್ದಾರೆ. ದೂರು ದಾಖಲಿಸಿಲಿಕ್ಕೆ ನಾನು ಧಮ೯ ನಿಂದನೆ ಮಾಡಿಲ್ಲ. ಯಾವ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಡಿ ಎನ್ನುವುದು ಕಷ್ಟ, ಆದರೆ... ತಾಳ್ಮೆ ಶಾಶ್ವತವಲ್ಲ: ಡಿಕೆಸು
ಸಂಸತ್‌ ಕ್ಷೇತ್ರ ಕಡಿತ ವಿರುದ್ಧ ದಕ್ಷಿಣ ಸಿಎಂಗಳ ಸಭೆ : ಸಿದ್ದರಾಮಯ್ಯ