10ನೇ ಬಾರಿ ಪರೀಕ್ಷೆಯಲ್ಲಿ ರೇಣುಕಾಚಾರ್ಯಗೆ ಕೊರೋನಾ ಶಾಕ್, ಆಸ್ಪತ್ರೆಗೆ ದಾಖಲು

Published : Sep 29, 2020, 06:48 PM ISTUpdated : Sep 29, 2020, 06:53 PM IST
10ನೇ ಬಾರಿ ಪರೀಕ್ಷೆಯಲ್ಲಿ ರೇಣುಕಾಚಾರ್ಯಗೆ ಕೊರೋನಾ ಶಾಕ್, ಆಸ್ಪತ್ರೆಗೆ ದಾಖಲು

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ತಗುಲಿದೆ

ಬೆಂಗಳೂರು, (ಸೆ.29): ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೂ ಕೊರೋನಾ ದೃಢಪಟ್ಟಿದೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. ಸದ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಶೇಷ ಅಂದ್ರೆ ಇದುವರೆಗೂ 10 ಬಾರಿ ಕೊರೋನಾ ಟೆಸ್ಟ್‌ಗೆ ಒಳಗಾಗಿದ್ದಾರಂತೆ. ಈ ಪೈಕಿ 10 ವರದಿಯಲ್ಲಿ ಕೊರೋನಾ ಪಾಸಿಟಿವ್ ಅಂತ ಬಂದಿದೆ. ಹೀಗೆಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಶಾಸಕ ರೇಣುಕಾಚಾರ್ಯಗೆ 6ನೇ ಬಾರಿ ಕೊರೋನಾ ನೆಗೆಟಿವ್‌

ರೇಣುಕಾಚಾರ್ಯ ಹೇಳಿದ್ದೇನು
ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. 
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. 

CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ಕಳೆದ ಆರು ತಿಂಗಳುಗಳಿಂದ ಕೋವಿಡ್19ರ ವಿರುದ್ಧ  ನಾನು ಸಹ ಒಬ್ಬ ಕೊರೊನಾ ವಾರಿಯರ್ ಆಗಿ ನಿರಂತರ ಜನಸೇವೆ ಮಾಡುತ್ತಿದ್ದು, ನನ್ನ ಮತ ಕ್ಷೇತ್ರದ ಬಂಧುಗಳು ನಿಮ್ಮ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಮುಖಾಂತರ ನನ್ನನ್ನು ಸಂಪರ್ಕಿಸ ಬಹುದು.

ನಿಮ್ಮೆಲ್ಲರ ಹಾರೈಕೆ ಹಾಗು ಆಶೀರ್ವಾದದಿಂದ ನಾನು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ, ನನ್ನ ಆರೋಗ್ಯದ ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮವು ನನಗೆ ಅಷ್ಟೇ ಮುಖ್ಯವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ...

Posted by MP Renukacharya on Tuesday, September 29, 2020

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!