ಸಿಡಿದೆದ್ದ ರೇಣುಕಾಚಾರ್ಯ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಅತೃಪ್ತ ಶಾಸಕರು

Published : Jan 17, 2021, 03:58 PM ISTUpdated : Jan 17, 2021, 04:44 PM IST
ಸಿಡಿದೆದ್ದ ರೇಣುಕಾಚಾರ್ಯ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಅತೃಪ್ತ ಶಾಸಕರು

ಸಾರಾಂಶ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದೀಗ ಅತೃಪ್ತ ಶಾಸಕರೆಲ್ಲರೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ದಾವಣಗೆರೆ, (ಜ.17): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದು ಸದ್ಯಕ್ಕೆ ಶಮನವಾಗೋ ಲಕ್ಷಣಗಳು ಕಾಣುತ್ತಿಲ್ಲ.

"

ಹೌದು...ಇದಕ್ಕೆ ಪೂರಕವೆಂಬಂತೆ ಅಸಮಾಧಾನಗೊಂಡ ಶಾಸಕರೆಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಬಹಿರಂಗ ಹೇಳಿಕೆ ನೀಡುತ್ತಿರೋ ಅಸಮಾಧಾನಿತ ಶಾಸಕರಿಗೆ ಬಿಜೆಪಿ ಸಾರಥಿ ಪರೋಕ್ಷ ಎಚ್ಚರಿಕೆ 

ಹೊನ್ನಾಳಿಯಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಅಸಮಾಧಾನಗೊಂಡ ಶಾಸಕರೆಲ್ಲಾ ನನಗೆ ಕಾಲ್ ಮಾಡಿದ್ದು, ನಾವೇಲ್ಲಾ ಒಂದು ಕಡೆ ಸೇರುತ್ತಿದ್ದೇವೆ. ಆದ್ರೆ ಯಾವುದೇ ಹೋಟೆಲ್ ರೇಸಾರ್ಟ್‌ನಲ್ಲಿ ಅಲ್ಲ ಮನೆಗಳಲ್ಲೇ ಸಭೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
 
ಈ ಹಿಂದೆ ರೇಸಾರ್ಟ್ ರಾಜಕಾರಣ ಮಾಡಿ ತಪ್ಪು ಮಾಡಿದ್ದೇವೆ. ಮತ್ತೆ ಅಂತಹ ತಪ್ಪನ್ನು ಮಾಡುವುದಿಲ್ಲ. ನಮ್ಮ ಹೋರಾಟ ಯಡಿಯೂರಪ್ಪನ ವಿರುದ್ದ ಅಲ್ಲ. ಯಡಿಯೂರಪ್ಪ ಯಾವಾಗಲು ನಮ್ಮ ನಾಯಕರೇ. ಅವರ ಬಗ್ಗೆ ಇಲ್ಲದ ಮಾತನಾಡಿದ್ರೆ ಬಾಯಲ್ಲಿ ಹುಳು ಬೀಳುತ್ತೆ. ಸಚಿವ ಸಂಪುಟದಲ್ಲಿ ಆಗಿರುವ ವ್ಯತ್ಯಾಸದ ಬಗ್ಗೆ ನಮ್ಮ ಹೋರಾಟ. ನಾನು ಅತೃಪ್ತರ ನಾಯಕನಲ್ಲ. ರೆಬೆಲ್ ಅಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ