ಜಮೀರ್ ಅಹ್ಮದ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಸಿಎಂ ರಾಜಕೀಯ ಕಾರ್ಯದರ್ಶಿ...!

Published : Apr 21, 2020, 05:19 PM IST
ಜಮೀರ್ ಅಹ್ಮದ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಸಿಎಂ ರಾಜಕೀಯ ಕಾರ್ಯದರ್ಶಿ...!

ಸಾರಾಂಶ

ರಾಜ್ಯದಲ್ಲಿ ಯಾರು ದೇಶದ್ರೋಹಿಗಳಿದ್ದಾರೆ ಮುಲಾಜಿಲ್ಲದೇ ಗುಂಡು ಹೊಡೆಯಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಗುಡುಗಿದ್ದಾರೆ.

ದಾವಣಗೆರೆ, (ಏ.21):  ರಾಜ್ಯದಲ್ಲಿ ಯಾರು ದೇಶದ್ರೋಹಿಗಳಿದ್ದಾರೆ ಮುಲಾಜಿಲ್ಲದೇ ಗುಂಡು ಹೊಡೆಯಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಗುಡುಗಿದ್ದಾರೆ.

ಈ ಕುರಿತಂತೆ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಗೂಂಢಾ ಕಾಯ್ದೆಯಡಿ ಜಮೀರ್ ಬಂಧಿಸಬೇಕು. ಜಮೀರ್ ಅಹ್ಮದ್ ಮತಾಂಧ, ದೇಶದ್ರೋಹಿ. ದೇಶದ್ರೋಹಿಗಳನ್ನು ಗುಂಡು ಹೊಡೆದು ಸಾಯಿಸಬೇಕು ಗುಡುಗಿದರು.

ನಾನು ತಪ್ಪು ಮಾಡಿದ್ರೆ ನೇಣಿಗೇರಿಸಲಿ: ಮತ್ತೆ ಅಬ್ಬರಿಸಿದ ರೇಣುಕಾಚಾರ್ಯ

ದೇಶದ್ರೋಹಿಗಳನ್ನು ಗುಂಡುಹೊಡೆದು ಸಾಯಿಸಬೇಕು ಎಂಬುದಾಗಿ ಮಾಜಿ ಶಾಸಕ ಜಮೀರ್ ಅಹ್ಮದ್ ವಿರುದ್ಧ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ್ ನೇರವಾಗಿಯೇ ವಾಗ್ದಾಳಿ ನಡೆಸಿದ್ದಾರೆ.

ಇನ್ಮುಂದೆ ಗುಂಡಿನ ಸದ್ದು ಮಾತ್ರ ಕೇಳಬೇಕು. ಜಮೀರ್ ಅಹ್ಮದ್ ಅರೆ ಹುಚ್ಚ. ಸರ್ಕಾರ ಏನ್ ಮಾವನ ಮನೇನಾ..? ಪಾಕಿಸ್ತಾನನಾ.? ಜಮೀರ್ ಪ್ರಚೋದನೆಯಿಂದಲೇ ಪಾದರಾಯನಪುರದಲ್ಲಿ ಗಲಾಟೆ ನಡೆದಿದೆ. ಜಮೀರ್ ಇದೇ ನಡವಳಿಕೆ ಮುಂದುವರೆಸಿದ್ರೇ ಬೇರೆ ರೀತಿಯ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!