
ಬೆಂಗಳೂರು, (ನ.27): ನಮ್ಮನ್ನು ನೋಡಿದಾಗಲೆಲ್ಲ ಕೂಡಲೇ ಮಂತ್ರಿ ಮಾಡುವುದಾಗಿ ಸಿಎಂ ಹೇಳುತ್ತಾರೆ. ಆದರೆ ಇನ್ನೂ ಕೂಡ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು , ಬಿಜೆಪಿ ಪಕ್ಷದಲ್ಲಿ ಯಾರನ್ನು ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ ಆದರೆ ನಾವು ತ್ಯಾಗ ಮಾಡಿ ಬಂದಿರುವವರಿಗೆ ಮೊದಲು ಮಂತ್ರಿ ಮಾಡಬೇಕು ಎಂದು ಎಂಟಿಬಿ ಈ ಮೂಲಕ ಒತ್ತಾಹಿಸಿದರು.
ಸಂಪುಟ ಸರ್ಕಸ್ಗೆ ಟ್ವಿಸ್ಟ್; ಬಿಎಸ್ವೈಗೆ ಹೈಕಮಾಂಡ್ನಿಂದ ಬಂತು ಸ್ಪಷ್ಟ ಸಂದೇಶ
ನಾವು ಅವರನ್ನು ಭೇಟಿ ಮಾಡಿದಗಲೆಲ್ಲ ಮಂತ್ರಿ ಮಾಡ್ತೀನಿ ಅಂತಾರೆ. ಆದರೆ ನಮ್ಮನ್ನು ಮಂತ್ರಿ ಮಾಡಲು ಸಿಎಂ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದರು ಪರೋಕ್ಷವಾಗಿ ಎಂಟಿಬಿ ತಮಗೆ ಸಚಿವ ಸ್ಥಾನ ಸಿಗುವುದು ಅನುಮಾನ ವ್ಯಕ್ತಪಡಿಸಿದಂತಿದೆ.
ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗಲು ಇನ್ನೂ ಎರಡ್ಮೂರು ದಿನ ಕಾಯಬೇಕಿದೆ. ಶುಕ್ರವಾರ ಬೆಳಗ್ಗೆ ಸಿಎಂ ಬಿಎಸ್ವೈಗೆ ಕರೆ ಮಾಡಿದ್ದ ಅಮಿತ್ ಷಾ, ಎರಡ್ಮೂರು ದಿನದಲ್ಲಿ ಸಂಪುಟ ವಿಚಾರದಲ್ಲಿ ಗ್ರೀನ್ ಸಿಗ್ನಲ್ ಕೊಡ್ತೀವಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಅವರೇ ಮಾಹಿತಿ ನೀಡಿದ್ದು, ಸಚಿವ ಸಂಪುಟ ವಿಸ್ತರಣೆಗೆ ಇನ್ನೆರಡು ದಿನದಲ್ಲಿ ಪಟ್ಟಿ ಬರಲಿದೆ ಎಂದಿದ್ದಾರೆ. ಅಂದು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದು ಬಹಿರಂಗ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.