
ಬೆಳಗಾವಿ(ಆ.18): ಸಿ.ಡಿ. ಶಿವುನಂತವರು ಮುಖ್ಯಮಂತಿಯಾದರೆ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, 'ಹಲವಾರು ಮಹಾನುಭಾವರು ಕರ್ನಾಟಕ ರಾಜ್ಯ ಕಟ್ಟಿದ್ದಾರೆ. ಸಿ.ಡಿ. ಶಿವುನಂತಹವರು ಸಿಎಂ ಆದರೆ, ರಾಜ್ಯದ ಮುಂದಿನ ಹಂತದ ಬಗ್ಗೆ ಪ್ರಮುಖ ರಾಜ ಕೀಯ ಪಕ್ಷಗಳು ವಿಚಾರ ಮಾಡುವ ಸನ್ನಿವೇಶವಿದೆ. ರಾಜ್ಯ ಉಳಿಸಬೇಕಿದೆ. ಸಿ.ಡಿ. ಶಿವು ಭ್ರಷ್ಟಾಚಾರ ದಲ್ಲಿ ತೊಡಗಿದ್ದು, ಅವರು ಸಿಎಂ ರೇಸ್ನಲ್ಲಿದ್ದರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಎಂದು ಭವಿಷ್ಯ ನುಡಿದರು.
ನಮ್ಮೊಳಗೆ ಭಿನ್ನಭಿಪ್ರಾಯ ಬೇಡ: ಯತ್ನಾಳ್, ರಮೇಶ್ಗೆ ರೇಣುಕಾಚಾರ್ಯ ಮನವಿ
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.