
ಬೆಳಗಾವಿ, (ಸೆ.12): ಕಾಂಗ್ರೆಸ್ನಿಂದ ಬಿಜೆಪಿಗೆ ಬರಲು ಹಣದ ಆಫರ್ ನೀಡಿದ್ದರು ಎಂದಿದ್ದ ಮಾಜಿ ಸಚಿವ ಮತ್ತು ಶಾಸಕ ಶ್ರೀಮಂತ ಪಾಟೀಲ್ ಇದೀಗ ಯೂಟರ್ನ್ ಹೊಡೆದಿದ್ದಾರೆ.
ಬಿಜೆಪಿಗೆ ಬರುವ ಮೊದಲು ನನಗೆ ಹಣದ ಆಫರ್ ನೀಡಲಾಗಿತ್ತು ಶ್ರೀಮಂತ ಪಾಟೀಲ್ ಹೇಳಿದ್ದರು. ಇದು ಪಕ್ಷಕ್ಕೆ ಹಾಗೂ ಬಿಜೆಪಿ ನಾಯಕರಿಗೆ ಮುಜುಗರವಾಗವಂತೆ ಮಾಡಿತ್ತು. ಅಲ್ಲದೇ ಶ್ರೀಮಂತ ಪಾಟೀಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದರಿಂದ ಎಚ್ಚೆತ್ತ ಶ್ರೀಮಂತ ಪಾಟೀಲ್ ಇದೀಗ ಉಲ್ಟಾ ಹೊಡೆದಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರೋವಾಗ ಹಣದ ಆಫರ್: 'ಕಮಲ' ನಾಯಕನ ಸ್ಫೋಟಕ ಹೇಳಿಕೆ
ಇಂದು (ಸೆ.12) ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಮಂತ ಪಾಟೀಲ್, ಆಪರೇಷನ್ ಕಮಲದ ವೇಳೆ ಯಾರೂ ನನಗೆ ಹಣದ ಆಮಿಷ ನೀಡಿರಲಿಲ್ಲ. ನಾನು ಬಿಜೆಪಿಯ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೆ. ಏನು ಅಪೇಕ್ಷೆ ಇಟ್ಟುಕೊಂಡು ಬಿಜೆಪಿಗೆ ಬರುತ್ತೀರಿ ಎಂದು ಕೇಳಿದ್ದರು. ನನ್ನದು ಯಾವುದೇ ಅಪೇಕ್ಷೆ ಇಲ್ಲವೆಂದು ಅವರಿಗೆ ತಿಳಿಸಿದ್ದೆ ಎಂದರು.
ಒಳ್ಳೆಯ ಸ್ಥಾನಮಾನ ನೀಡುವಂತೆ ಮಾತ್ರ ಕೇಳಿಕೊಂಡಿದ್ದೆ. ಪ್ರಧಾನಿ ಮೋದಿಯವರ ಕೆಲಸ ಮತ್ತು ಬಿಜೆಪಿಯ ವಿಚಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೆ ಎಂದು ಹೇಳುವ ಮೂಲಕ ಬಿಜೆಪಿಯ ಹಣದ ಆಫರ್ ಹೇಳಿಕೆ ಬಗ್ಗೆ ಶ್ರೀಮಂತ ಪಾಟೀಲ್ ಯೂಟರ್ನ್ ತೆಗೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.