ಸಿದ್ದರಾಮಯ್ಯಗೆ ಅರುಳು ಮರುಳು ಶುರು: ವೇದವ್ಯಾಸ ಕಾಮತ್‌

Published : Jan 08, 2023, 12:30 AM IST
ಸಿದ್ದರಾಮಯ್ಯಗೆ ಅರುಳು ಮರುಳು ಶುರು: ವೇದವ್ಯಾಸ ಕಾಮತ್‌

ಸಾರಾಂಶ

ಕಳೆದ ಕೆಲ ದಿನಗಳ ಹಿಂದೆ ಉಗ್ರ ಚಟುವಟಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರ ಪುತ್ರನನ್ನು ಬಂಧಿಸಿರುವ ವಿಚಾರದಲ್ಲಿ ತಮ್ಮ ನಿಲುವು ಏನೆಂಬುದನ್ನು ಜನತೆಯ ಮುಂದಿಡಲಿ ಎಂದು ಆಗ್ರಹಿಸಿದ ಶಾಸಕ ವೇದವ್ಯಾಸ ಕಾಮತ್‌

ಮಂಗಳೂರು(ಜ.08):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಯೋ ಸಹಜ ಅರುಳು ಮರುಳು ಪ್ರಾರಂಭವಾಗಿದೆ. ಹಾಗಾಗಿ ಅವರು ರಾಷ್ಟ್ರೀಯವಾದ ಮತ್ತು ಉಗ್ರವಾದದ ನಡುವಿನ ಸಾಮ್ಯತೆ ತಿಳಿಯುತ್ತಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದ್ದಾರೆ.

ಪದೇ ಪದೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಅವಮಾನಕರವಾಗಿ ಹೇಳಿಕೆ ನೀಡುವ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಶಾಸಕ ವೇದವ್ಯಾಸ ಕಾಮತ್‌, ಇತ್ತೀಚೆಗೆ ಉಗ್ರರ ಸಂಪರ್ಕವಿರುವ ಕಾರಣ ಕಾಂಗ್ರೆಸ್‌ ಮುಖಂಡನ ಪುತ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಬಗ್ಗೆ ಮಾತನಾಡುವ ಧೈರ್ಯ ಸಿದ್ದರಾಮಯ್ಯ ಅವರಿಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಶಾಸಕ ಭರತ್ ಶೆಟ್ಟಿ ಎಚ್ಚರಿಕೆ..!

ಆರ್‌ಎಸ್‌ಎಸ್‌ ಸಹಸರಸಂಘ ಚಾಲಕರಾಗಿದ್ದ ಗುರೂಜಿ ಅವರು ಮರಣ ಹೊಂದಿದ ಸಂದರ್ಭದಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್‌ ಶ್ರದ್ಧಾಂಜಲಿ ಸಲ್ಲಿಸಿದ್ದನ್ನು ಪಕ್ಷಾಂತರಿ ಸಿದ್ದರಾಮಯ್ಯ ಮರೆತಿದ್ದಾರೆ. ಇಂಡೋ-ಚೈನಾ ಯುದ್ಧದ ಸಂದರ್ಭದಲ್ಲಿ ಸಂಘದ ಸ್ವಯಂಸೇವಕರು ಸೈನಿಕರ ಜೊತೆಗಿದ್ದು ಸಹಕಾರ ನೀಡಿದ್ದಾರೆ. ಅದಕ್ಕಾಗಿಯೇ ಅಂದಿನ ಪ್ರಧಾನಿ ರಾಜಪಥದಲ್ಲಿ ಸಂಘದ ಪಥ ಸಂಚಲನಕ್ಕೆ ಅವಕಾಶ ನೀಡಿರುವುದು ಎನ್ನುವುದನ್ನು ಅರಿತುಕೊಳ್ಳಲಿ ಎಂದು ಶಾಸಕ ಕಾಮತ್‌ ಹೇಳಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಉಗ್ರ ಚಟುವಟಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರ ಪುತ್ರನನ್ನು ಬಂಧಿಸಿರುವ ವಿಚಾರದಲ್ಲಿ ತಮ್ಮ ನಿಲುವು ಏನೆಂಬುದನ್ನು ಜನತೆಯ ಮುಂದಿಡಲಿ ಎಂದು ಶಾಸಕ ವೇದವ್ಯಾಸ ಕಾಮತ್‌ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ