
‘ವಿರೋಧ ಪಕ್ಷ ದಿಲ್ಲಿಯಲ್ಲಿ, ಆಡಳಿತ ಪಕ್ಷ ಬಿಡದಿಯಲ್ಲಿ: ಜನತೆ ಬೀದಿಯಲ್ಲಿ!’ ಸದ್ಯ ಕರ್ನಾಟಕದ ಸ್ಥಿತಿ ಇದೆ ಆಗಿದೆ. ಅಧಿಕೃತ ವಿರೋಧ ಪಕ್ಷ ಎಂದು ಕರೆಸಿಕೊಂಡಿದ್ದ ಬಿಜೆಪಿಯ 104 ಜನ ಶಾಸಕರು ದೆಹಲಿಗೆ ತೆರಳಿ 4 ದಿನ ಕಳೆದಿದೆ. ಐಷಾರಾಮಿ ಹೊಟೇಲ್ನಲ್ಲಿ ಚರ್ಚೆ ನಡೆಸುತ್ತಿದ್ದಾರೆ.
ಇನ್ನು ಇದೀಗ ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದಿದ್ದು ಶಾಸಕರನ್ನು ನೇರವಾಗಿ ಈಗಲ್ ಟನ್ ರೆಸಾರ್ಟ್ ಗೆ ಕರೆದುಕೊಂಡು ಹೋಗಲಾಗಿದೆ. ಒಂದು ಕಡೆ ಬಿಜೆಪಿ 104 ಶಾಸಕರು ಇನ್ನೊಂದು ಕಡೆ ಕಾಂಗ್ರೆಸ್ನ 75 ಶಾಸಕರು ರೆಸಾರ್ಟ್ ವಾಸ್ತವ್ಯ ಮಾಡಿದ್ದಾರೆ.
ಬಸ್ ಹತ್ತದೆ ರೆಬಲ್ ಶಾಸಕರೊಬ್ಬರು ಎಸ್ಕೇಪ್! 4+1 = 5?
ಕೆಲವರು ಹೊಟೆಲ್ ಬಿಟ್ಟು ಹೊರಗೆ ಬಂದಿರಬಹುದು. ಆದರೆ ಅವರೆಲ್ಲರ ಮನಸ್ಸು ಶಾಸಕರನ್ನು ಹಿಡಿದಿಡುವಲ್ಲಿಯೇ ಇದೆ. ಇನ್ನು ಜೆಡಿಎಸ್ನ ಶಾಸಕರೂ ಗೌಡರ ಸೂಚನೆ ಪಾಲನೆ ಮಾಡುತ್ತಿದ್ದಾರೆ.
ರಾಜ್ಯದ 150ಕ್ಕೂ ಅಧಿಕ ತಾಲೂಕಿನಲ್ಲಿ ಬರ ಇದೆ. ಸಾಲ ಮನ್ನಾ ಹಣ ಕೈ ಸೇರುವ ನಿರೀಕ್ಷೆಯಲ್ಲಿ ರೈತರು ದಿನ ಕಳೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಬ್ಯುಸಿಯಾಗಿದೆ. ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಹಿಂದೆಂದೂ ಕಾಣದ ರೆಸಾರ್ಟ್ ರಾಜಕಾರಣ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.