'ನಾಯಕತ್ವದ ಬದಲಾವಣೆ: ಬಿಜೆಪಿಯಲ್ಲಿ ಯಡಿಯೂರಪ್ಪಗೆ ಮತ್ತೊಬ್ಬ ಪ್ರತಿಸ್ಪರ್ಧಿಯೇ ಇಲ್ಲ'

Published : Sep 19, 2020, 06:02 PM ISTUpdated : Sep 19, 2020, 06:24 PM IST
'ನಾಯಕತ್ವದ ಬದಲಾವಣೆ: ಬಿಜೆಪಿಯಲ್ಲಿ ಯಡಿಯೂರಪ್ಪಗೆ ಮತ್ತೊಬ್ಬ ಪ್ರತಿಸ್ಪರ್ಧಿಯೇ ಇಲ್ಲ'

ಸಾರಾಂಶ

ಸದ್ಯ ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದೆ. ಇದರ ಮಧ್ಯೆ ರಾಜ್ಯದಲ್ಲಿ ಸಿಎಂ ಬದಲಾವಣೆಯ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದ್ದು, ಬಿಜೆಪಿ ನಾಯಕರು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ.

ಶಿವಮೊಗ್ಗ, (ಸೆ.19):  ನಾಯಕತ್ವದ ಬದಲಾವಣೆಯ ವಿಚಾರವಾಗಿ ಮಾತನಾಡಿರುವ ಎಂಎಲ್​ಸಿ ಆಯನೂರು ಮಂಜುನಾಥ, ಸಿಎಂ ರೇಸ್​ನಲ್ಲಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಬಿಜೆಪಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. 

ವಯೋಮಿತಿ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಮಾಡುವುದಿಲ್ಲ. ಇಳಿ ವಯಸ್ಸಿನಲ್ಲೂ ಯಡಿಯೂರಪ್ಪ ಅವರಂತಹ ಸಕ್ರಿಯ ರಾಜಕಾರಣಿ ದೇಶದಲ್ಲಿ ಮತ್ತೊಬ್ಬರಿಲ್ಲ. ಕೊರೋನಾನಾ ಬಂದ ಸಂದರ್ಭದಲ್ಲೂ ಆಸ್ಪತ್ರೆಯಲ್ಲಿದ್ದುಕೊಂಡೇ ಆಡಳಿತ ನಡೆಸಿದ್ದು ಅದಕ್ಕೆ ಸಾಕ್ಷಿ ಎಂದು ಎಂದರು.

ನಾಯಕತ್ವ ಬದಲಾವಣೆ: ‌ಇದುವರೆಗೆ ನಾನು ನುಡಿದ ಭವಿಷ್ಯ ಎಂದಿಗೂ ಸುಳ್ಳಾಗಿಲ್ಲ ಎಂದ ಬಿಜೆಪಿ ನಾಯಕ 

ಹೋರಾಟ ಎನ್ನುವುದು ಯಡಿಯೂರಪ್ಪ ಅವರ ರಕ್ತದಲ್ಲಿ ಬೆರೆತು ಹೋಗಿದ್ದು, ಅವರೇ ಅವಧಿಪೂರ್ಣಗೊಳಿಸಲಿದ್ದಾರೆ. ಮುಂದಿನ ಚುನಾವಣೆವರೆಗೂ ಅವರೇ ಸಿಎಂ ಆಗಿರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಶಿವಮೊಗ್ಗಕ್ಕೆ ಸೀಮಿತ, ರಾಜ್ಯಕ್ಕಲ್ಲ ಎಂಬ ಶಾಸಕ ಉಮೇಶ್​ ಕತ್ತಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಆಯನೂರು, ಉಮೇಶ್​ ಕತ್ತಿ ಯಾವುದೋ ಗುಂಗಲ್ಲಿದ್ದಾಗ ಆ ರೀತಿ ಹೇಳಿಕೆ ನೀಡಿರಬಹುದು. ರಾಜ್ಯವನ್ನೇ ಇಬ್ಭಾಗ ಮಾಡಲು ಹೊರಟಿದ್ದ ಅವರು ಹೆಚ್ಚು ಗುಟ್ಖಾ ಹಾಕುತ್ತಾರೆ. ಅವರ ಈ ಹೇಳಿಕೆ ಅದರ ಪರಿಣಾಮ ಇರಬಹುದು ಎಂದು ಟಾಂಗ್ ಕೊಟ್ಟರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!