ಸಿದ್ದರಾಮಯ್ಯ ವಿರುದ್ಧ 62 ಕೇಸುಗಳು ಬಾಕಿ: ಬಾಂಬ್ ಸಿಡಿಸಿದ ಬಿಜೆಪಿ MLC

Published : Nov 04, 2019, 04:39 PM IST
ಸಿದ್ದರಾಮಯ್ಯ ವಿರುದ್ಧ 62 ಕೇಸುಗಳು ಬಾಕಿ: ಬಾಂಬ್ ಸಿಡಿಸಿದ ಬಿಜೆಪಿ MLC

ಸಾರಾಂಶ

ಸಿದ್ದರಾಮಯ್ಯ ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇದ್ದು, ಅವರೇ ರಾಜಿನಾಮೆ ನೀಡಬೇಕಾಗಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಹೊರ ಬಾಂಬ್ ಸಿಡಿಸಿದರು.

ಶಿವಮೊಗ್ಗ, (ನ.4): ಆಡಿಯೋ ಮೂಲಕ ಬಿಎಸ್‌ವೈ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿರುಗೇಟು ನೀಡಿದ್ದಾರೆ.

ಇಂದು (ಸೋಮವಾರ) ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಯಿಗೆ ಬಂದಂತೆ ಮಾತನಾಡಬಲ್ಲ ಏಕೈಕ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯ. ಸಿದ್ದರಾಮಯ್ಯ ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇವೆ. ಅವರೇ ರಾಜಿನಾಮೆ ನೀಡಬೇಕಾಗಿದೆ.  ಇಂಥವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕೇಂದ್ರ ಗೃಹಸಚಿವ ಅಮಿತ್ ಷಾ ರಾಜಿನಾಮೆ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ಅಮಿತ್ ಶಾ, ಬಿಎಸ್‌ವೈ ರಾಜೀನಾಮೆಗೆ ಆಗ್ರಹ

ಎಸಿಬಿಯ ಹಲ್ಲುಗಳನ್ನು ಮುರಿದು, ಉಗುರುಗಳನ್ನು ಮೊಂಡು ಮಾಡಿರುವ ಸಿದ್ಧರಾಮಯ್ಯ, ಯಾವುದೋ ವಿಡಿಯೋ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಹಾಸ್ಯಾಸ್ಪದವೇ ಸರಿ. ತಮ್ಮ ಕೇಸುಗಳಿರುವ ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿಯನ್ನು ತಂದು ಲೋಕಾಯುಕ್ತವನ್ನು ರದ್ದು ಮಾಡಿದ್ದಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ಮತ್ತೊಬ್ಬರ ಬಗ್ಗೆ ಆರೋಪ ಮಾಡಲು ನೈತಿಕತೆ ಇಲ್ಲ.  ಸಿದ್ಧರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ, ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು ಸನ್ಮಾನಿಸುವೆ ಎಂದು ಟೀಕಿಸಿದರು.

ಬಿಎಸ್ ವೈ ಆಡಿಯೋ ಬಗ್ಗೆ ಬಿಜೆಪಿಯಲ್ಲಿ ಆಂತರಿಕ ತನಿಖೆ

ಆತನ ವ್ಯಾಕರಣದಲ್ಲಿ ಬಹುವಚನವೇ ಇಲ್ಲ. ಆತ ಅತ್ಯಂತ ಸುಳ್ಳ, ದುರಾಂಹಕಾರಿ, ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿಯಾಗಿದ್ದು, ಬೇರೆಯವರಿಗೆ ವ್ಯಾಕರಣದ ಬಗ್ಗೆ ಸಿದ್ಧರಾಮಯ್ಯ ಪಾಠ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

ಇಂತಹ ಸಿದ್ಧರಾಮಯ್ಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲವಾಗಿದ್ದು, ಅವರ ಬಗ್ಗೆ ಕಾಂಗ್ರೆಸ್ನವರೇ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ನಾವು ಕೂಡ ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಲೇವಡಿ ಮಾಡಿದರು.

ಆತ ಆಡುವ ಭಾಷೆ ಭಾಷೆಯಲ್ಲ.  ಆ ಮನುಷ್ಯನ ಭಾಷೆಗೆ ಯಾರೂ ತೂಕ ನೀಡಬಾರದು ಎಂದು ಏಕವಚನದಲ್ಲಿಯೇ  ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ