ಹೆಬ್ಬಾಳ್ಕರ್ ಆಣೆ ಪ್ರಮಾಣದ ಸವಾಲು: ಸವದತ್ತಿ ಯಲ್ಲಮನ ಬಳಿ ಹರಕೆ ಹೊತ್ತಿದ್ದೇನೆ, ಸಿ.ಟಿ ರವಿ

Published : Dec 25, 2024, 04:32 PM IST
ಹೆಬ್ಬಾಳ್ಕರ್ ಆಣೆ ಪ್ರಮಾಣದ ಸವಾಲು: ಸವದತ್ತಿ ಯಲ್ಲಮನ ಬಳಿ ಹರಕೆ ಹೊತ್ತಿದ್ದೇನೆ, ಸಿ.ಟಿ ರವಿ

ಸಾರಾಂಶ

ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ ಮುಂದಿನ ದಿನಗಳಲ್ಲಿ ಆಣೆ ಪ್ರಮಾಣಕ್ಕೆ ಧರ್ಮಸ್ಥಳಕ್ಕೂ ಹೋಗುತ್ತೇನೆ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗಿ ಹರಕೆ ತೀರಿಸುತ್ತೇನೆ ಎಂದು ಹೇಳಿದ ವಿಧಾನಪರಿಷತ್ ಸದಸ್ಯ ಸಿ..ಟಿ ರವಿ    

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಡಿ.25): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಕಿರುವ ಆಣೆ ಪ್ರಮಾಣದ ಸವಾಲಿಗೆ ವಿಧಾನಪರಿಷತ್ ಸದಸ್ಯ ಸಿ..ಟಿ ರವಿ ತಿರುಗೇಟು ನೀಡಿದ್ದಾರೆ.  ಇಂದು(ಬುಧವಾರ) ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಸಿ..ಟಿ ರವಿ ಅವರು, ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ ಮುಂದಿನ ದಿನಗಳಲ್ಲಿ ಆಣೆ ಪ್ರಮಾಣಕ್ಕೆ ಧರ್ಮಸ್ಥಳಕ್ಕೂ ಹೋಗುತ್ತೇನೆ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗಿ ಹರಕೆ ತೀರಿಸುತ್ತೇನೆ ಎಂದು ಹೇಳಿದರು. 

ಸದನದಲ್ಲಿ ನಡೆದ ಘಟನೆಯ ವೇಳೆ ಹಾಗೂ ಸಿಸಿಟಿವಿ ವಿಡಿಯೋ ಎಲ್ಲಾ ಇದೆ. ವಿಡಿಯೋ ಮಾಡಿದವರು ಯಾರು ಅಪರಿಚಿತರಲ್ಲ, ಎಲ್ಲರೂ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಅವರ ಜೊತೆ ಇದ್ದವರೆ ಹಲ್ಲೆ ಮಾಡಿದ್ದು, ನಾನು ಕಳೆದ ಡಿಸೆಂಬರ್ 19ರ ದಿನವೇ ದೂರು ನೀಡಿದ್ದೇನೆ ಈವರೆಗೂ ಎಫ್ಐಆರ್ ಆಗಿಲ್ಲ ಅಂದರೆ ಕಮಿಷನರ್ ಅಮಾನತ್ತಾಗಬೇಕು. ಸೆಕ್ಷನ್ 135 (a) ಶಾಸಕರಿಗೆ ವಿಶೇಷ ಸವಲತ್ತು ಇದೆ ಆದರೆ ಯಾವುದೇ ನೋಟಿಸ್ ಕೊಡದೆ ಬೆಳಗಾವಿ ಧಾರವಾಡ ಹುಬ್ಬಳ್ಳಿ ಸೇರಿದಂತೆ ಸುಮಾರು ನಾಲ್ಕು ನೂರು ಕಿಲೋಮೀಟರ್ ನನ್ನನ್ನು ಸುಖ ಸುಮ್ಮನೆ ಸುತ್ತಿಸಿದ್ರು. ಊಟ ನೀರು ಚಿಕಿತ್ಸೆ ಕೊಡದೆ ಚಿತ್ರಹಿಂಸೆ ನೀಡಿದರು ಎಂದರು.

ಲಕ್ಷ್ಮೀ ಪಂಥಾಹ್ವಾನ, ಕೆಸರಿನ ಕಥೆ ಹೇಳಿದ ಕೇಸರಿಕಲಿ! ಸಿ.ಟಿ ರವಿಗೆ ಸಚಿವೆ ಆತ್ಮಸಾಕ್ಷಿಯ ಸವಾಲ್!

ಎಸ್.ಪಿ ಹಾಗೂ ಕಮಿಷನರ್ ಮೇಲೆ ಕ್ರಮಕ್ಕೆ ಆಗ್ರಹ : 

ಇದೆ ವೇಳೆ ಬೆಳಗಾವಿಯ ಖಾನಾಪುರ ಸಿಪಿಐ ಅಮಾನತ್ತು ಹಿನ್ನೆಲೆ ಮಾತನಾಡಿದ ಸಿ.ಟಿ. ರವಿರ ಅವರು, ಅಮಾನತ್ತು ಆಗಿರುವ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಅಮಾನತ್ತು ಮಾಡಬೇಕಾಗಿರೋದು ಶಾರೀರಿಕ ಹಾಗೂ ಮಾನಸಿಕ ದೌರ್ಜನ್ಯ ಮಾಡಿದವರನ್ನು, ಪೊಲೀಸ್ ಠಾಣೆಯಲ್ಲಿ ಯಾವುದೇ ಬಿಜೆಪಿಯ ಸಭೆ ನಡೆದಿಲ್ಲ ಘಟನೆಯ ಬಳಿಕ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕರು ಹಾಗೂ ಮುಖಂಡರು ಇದ್ದರು. ಅಲ್ಲಿ ಕಮಿಷನರ್ ಹಾಗೂ ವಿಪಕ್ಷ ನಾಯಕರು ಶಾಸಕರು ಬಂದಿದ್ದರು. ಅದನ್ನ ಬಿಜೆಪಿ ಸಭೆ ಅನ್ನೋದು ಸರ್ಕಾರದ ಪೂರ್ವಗ್ರಹ ಪೀಡಿತ ಎಂದು ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವುದು ಸರಿಯಲ್ಲ, ನಿಜವಾಗಿಯೂ ಕ್ರಮ ಆಗಬೇಕಿರೋದು ಎಸ್.ಪಿ ಹಾಗೂ ಕಮಿಷನರ್ ಮೇಲೆ ಎಂದು ಖಂಡಿಸಿದರು.ಸದನದಲ್ಲಿ ನಡೆದ ಘಟನೆ ಜಾತಿ ಸಂಘರ್ಷಕ್ಕೆ ತಿರುಗಿದೆ ಎಂಬ ಹೇಳಿಕೆಯ ವಿರುದ್ಧ ಮಾತನಾಡಿದ ಸಿ.ಟಿ ರವಿ ನಾನು ಹಿಂದುತ್ವವಾದಿ ಹಿಂದುತ್ವ ಕಾಗಿಯೇ ಬಂದವನು. ಜಾತಿ ಮಾಡಿಲ್ಲ ಮುಂದೆಯೂ ಮಾಡಲ್ಲ ಎಂದರು.

ಮುನಿರತ್ನ ಮೇಲಿನ ಹಲ್ಲೆಗೆ ಖಂಡನೆ

ಶಾಸಕ ಮುನಿರತ್ನ ಮೇಲಿನ ಹಲ್ಲೆಗೆ ಸಿ.ಟಿ ರವಿ ಖಂಡನೆ ವ್ಯಕ್ತಪಡಿಸಿದ್ದು ಇದೊಂದು ಗೂಂಡಾ ರಾಜ್ಯ ಎಂದು ಆಕ್ರೋಶಿಸಿದರು, ಮುನಿರತ್ನ ಅವರ ಮೇಲೆ ಹಲ್ಲೆ ಆಗಿರುವುದು ಕಂಡು ಬಂದಿದೆ. ಗೂಂಡ ರಾಜ್ಯವಾಗಿ ಮಾರ್ಪಾಡಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತುರ್ತು ಪರಿಸ್ಥಿತಿಯನ್ನೇ ಎದುರಿಸಿದ್ದೇನೆ ಈ ಗುಂಡಗಿರಿಗೆಲ್ಲ ಬಿಜೆಪಿ ಹಾಗೂ ನಾವು ಹೆದರುವುದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ಬಳಿಕ ಮುನಿರತ್ನಾಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿ.ಟಿ ರವಿ, ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆತ್ಮಸ್ಥೈರ್ಯ ತುಂಬಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!