ಸವಿತಾ ಸಮಾಜವನ್ನು ನಾನು ಅಪಮಾನ ಮಾಡಿಲ್ಲ, ತಪ್ಪುಗ್ರಹಿಕೆಗೆ ಅವಕಾಶ ಮಾಡಬೇಡಿ: ಸಿ.ಟಿ.ರವಿ

Published : Oct 30, 2025, 05:49 AM IST
CT Ravi

ಸಾರಾಂಶ

ನಾನು ಸವಿತಾ ಸಮಾಜಕ್ಕೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸಮಾಜದವರು ಕೂಡ ಇದರ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು. ಆದರೂ ನನ್ನಿಂದ ಸಮುದಾಯಕ್ಕೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಬೆಳಗಾವಿ (ಅ.30): ನಾನು ಸವಿತಾ ಸಮಾಜಕ್ಕೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸಮಾಜದವರು ಕೂಡ ಇದರ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು. ಆದರೂ ನನ್ನಿಂದ ಸಮುದಾಯಕ್ಕೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಅ.25ರಂದು ಸಿ.ಟಿ.ರವಿ ಅವರು ಚಿಕ್ಕಮಗಳೂರು ಮೆಡಿಕಲ್‌ ಕಾಲೇಜಿಗೆ ಭೇಟಿ ನೀಡಿದ್ದಾಗ ಮೊಬೈಲ್‌ನಲ್ಲಿ ಮಾತನಾಡುತ್ತಾ ಸವಿತಾ ಸಮುದಾಯದವರನ್ನು ನಿಂದಿಸಿದ್ದಾರೆ ಎನ್ನಲಾದ ವೈರಲ್‌ ವಿಡಿಯೋ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಸವಿತಾ ಸಮಾಜಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ, ನಾನು ಆ ರೀತಿ ಹೇಳಿಲ್ಲ. ತಪ್ಪು ಗ್ರಹಿಕೆಗೆ ಅವಕಾಶ ಮಾಡಿಕೊಡಬೇಡಿ. ಸವಿತಾ ಸಮಾಜಕ್ಕೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ತನಿಖೆಗೆ ನಾನು ಆಗ್ರಹಿಸುತ್ತೇನೆ. ಸಮಾಜದವರು ಕೂಡ ಇದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಹಿಂದೂ ಸಮಾಜ ಒಡೆಯುವ ಸಂಚು: ಹಿಂದೂ ಸಮಾಜವನ್ನು ಒಡೆಯುವುದು ಮುಂದೊಂದು ದಿನ ರಾಷ್ಟ್ರ ವಿರೋಧಿ ಸಂಚು ಮಾಡುವವರಿಗೆ ದಾರಿ ಆಗುತ್ತದೆ. ಯಾರೂ ಹಿಂದೂ ಸಮಾಜವನ್ನು ಬಿಡಬಾರದು. ಬದಲಾಗಿ ಆಚರಣೆಯಲ್ಲಿರುವ ಅಸ್ಪೃಶ್ಯತೆಯಂತ ದೋಷಗಳನ್ನು ತೊಡೆದುಹಾಕಿ ಹಿಂದೂ ಸಮಾಜವನ್ನು ಸಶಸ್ತ್ರಗೊಳಿಸಬೇಕು. ನಮಗೆ ಬಸವಣ್ಣನವರು ಬೇಕು, ಅಂಬೇಡ್ಕರ್ ಕೂಡ ಬೇಕು. ಹಿಂದುಗಳನ್ನು ಒಗ್ಗಟ್ಟಾಗಿ ಇಡುವ ಕೆಲಸ ಮಾಡಬೇಕು ಎಂದರು.

ವಿದ್ಯಾರ್ಥಿಗಳಲ್ಲಿರುವ ಕಲೆಯನ್ನು ಪೋಷಿಸುವ ಕಾರ್ಯ ನಡೆಯಬೇಕು

ಆಧುನಿಕ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳನ್ನು ಯಂತ್ರಗಳಂತೆ ಸಿದ್ಧಪಡಿಸುತ್ತಿದೆ. ವಿದ್ಯಾರ್ಥಿಗಳಲ್ಲಿರುವ ಕಲೆಯನ್ನು ಪೋಷಿಸುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಸಂಘಟನೆ ಕಾರ್ಯಪ್ರವೃತ್ತವಾಗಬೇಕು ಎಂದು ಹೇಳಿದರು. 1999 ರಲ್ಲಿ 70,000 ಕ್ಕಿಂತ ಹೆಚ್ಚು ಯುವಕರ ಸಂಘಗಳಿದ್ದವು, ಆದರೆ, ಇದೀಗ 2-3 ಸಾವಿರ ಯುವಕ ಸಂಘಗಳಿವೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿ ಕಾಯ್ದೆ ಕಡ್ಡಾಯ ಮಾಡಿದ ಪರಿಣಾಮ ಯುವ ಸಂಘಗಳು ಕ್ಷೀಣಿಸಿವೆ. ಸ್ಥಿರ ನಿಧಿಯನ್ನು ನೀಡದಿರುವ ಕಾರಣ ಸಂಘಗಳಿಗೆ ಯಾವ ಪ್ರಯೋಜನವಿಲ್ಲ, ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸುವೆ ಎಂದು ಭರವಸೆ ನೀಡಿದರು.

ಕಲೆಯನ್ನೇ ಆರಾಧಿಸಿ ಬದುಕಿದ ಹಲವಾರು ಕಲಾವಿದರಿಗೆ ಮಾಸಾಶನ ಸರಿಯಾಗಿ ಬರುತ್ತಿಲ್ಲ. ಕೂಡಲೇ ಇದರತ್ತ ಗಮನಹರಿಸಿ ಅವರ ವೃದ್ಧಾಪ್ಯ ಕಾಲದಲ್ಲಿ ಸರ್ಕಾರ ಮಾಶಾಸನ ನೀಡಿ ನೆರವಾಗಬೇಕು. ಕಲೆ ಯನ್ನು ನಂಬಿಕೊಂಡು ಬದುಕು ಸಾಗಿಸುವ ಕಲಾವಿದರಿಗೆ ಸ್ಪಂದಿಸುವ ಜೊತೆಗೆ ಆರ್ಥಿಕ ಶಕ್ತಿ ತುಂಬಲು ಮಾಶಾಸನದ ಅವಶ್ಯಕತೆಯಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಜಾನಪದ ಬಾಲಾಜಿ ಇತ್ತೀಚಿನ ದಿನಗಳಲ್ಲಿ ರಾಜ್ಯದ ಯುವ ಜನ ಮೇಳಗಳು, ರಾಜ್ಯ ಜಿಲ್ಲಾ ಯುವ ಪ್ರಶಸ್ತಿಗಳು, ಯುವ ಸಂಪರ್ಕ ಸಭೆಗಳು, ಸಂಘಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸಾಮಗ್ರಿಗಳ ಯೋಜನೆ, ಗರುಡಿ ಮನೆ ಉಪಕರಣಗಳು ನೀಡುವುದನ್ನು ಸರ್ಕಾರ ಪುನರಾರಂಭಿಸಬೇಕು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ