ಸಿಎಂ ಕೆಳಗಿಳಿಸಲು ಕಾಂಗ್ರೆಸ್ಸಿಗರಿಗೇ ಹೆಚ್ಚು ಆತುರ: ಸಿ.ಟಿ.ರವಿ

Published : Oct 10, 2024, 08:22 AM IST
ಸಿಎಂ ಕೆಳಗಿಳಿಸಲು ಕಾಂಗ್ರೆಸ್ಸಿಗರಿಗೇ ಹೆಚ್ಚು ಆತುರ: ಸಿ.ಟಿ.ರವಿ

ಸಾರಾಂಶ

ಸಿಎಂ ಯಾರಿಗೂ ಬಗ್ಗಲ್ಲ, ಜಗ್ಗಲ್ಲ, ಹೆದರಲ್ಲ ಅಂತ ಹೇಳುತ್ತಿ ದ್ದಾರೆ. ಆದರೆ ಇದು ಪ್ರಜಾಪ್ರಭುತ್ವ. ಇಲ್ಲಿ ಇಂಥದ್ದೆಲ್ಲ ನಡೆಯುವುದಿಲ್ಲ. ಸಂವಿಧಾನಕ್ಕೆ ಪ್ರತಿಯೊಬ್ಬರೂ ತಲೆಬಾಗಬೇಕು. ಜನರಿಗೆ ಹೆದರಲೇಬೇಕು ಎಂದು ಹೇಳಿದ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ 

ದಾವಣಗೆರೆ(ಅ.10):  ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್‌ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾರೆ. ಇದು ಸಿದ್ದರಾ ಮಯ್ಯ ಅವರು ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಾರಿಗೂ ಬಗ್ಗಲ್ಲ, ಜಗ್ಗಲ್ಲ, ಹೆದರಲ್ಲ ಅಂತ ಹೇಳುತ್ತಿ ದ್ದಾರೆ. ಆದರೆ ಇದು ಪ್ರಜಾಪ್ರಭುತ್ವ. ಇಲ್ಲಿ ಇಂಥದ್ದೆಲ್ಲ ನಡೆಯುವುದಿಲ್ಲ. ಸಂವಿಧಾನಕ್ಕೆ ಪ್ರತಿಯೊಬ್ಬರೂ ತಲೆಬಾಗಬೇಕು. ಜನರಿಗೆ ಹೆದರಲೇಬೇಕು ಎಂದು ಹೇಳಿದ್ದಾರೆ. 

ಮುಡಾ ಕೇಸಿಂದ ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಸಿದ್ದು ರಾಜೀನಾಮೆ ನೀಡಲಿ: ಕೋಳಿವಾಡ

ಸಿಎಂ ಅವರನ್ನು ಕುರ್ಚಿಯಿಂದ ಕೆಳಗಿಳಿಸಬೇಕೆಂಬ ಆತುರವಾಗಲಿ, ಅವಸರವಾಗಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ಸಿಗರಿಗೇ ಆ ಕುರಿತ ಆತುರ ಎಂದು ಕುಟುಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ