
ಬೆಂಗಳೂರು, (ಡಿ.01): ಸಚಿವ ಸ್ಥಾನಕ್ಕೆ ಹೈಕೋರ್ಟ್ ಅನರ್ಹಗೊಳಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಕಿಡಿ ಕಾರಿದ್ದಾರೆ.
ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಯಡಿಯೂರಪ್ಪ ಯಾರ ಸಹಕಾರದಿಂದ ಕುರ್ಚಿಯಲ್ಲಿ ಕುಳಿತಿದ್ದಾರೆ? ಯಾರ ಮರ್ಜಿಯಲ್ಲಿದ್ದಾರೆ ಎಂಬುದನ್ನು ಮರೆತಿದ್ದಾರೆ. ಸರ್ಕಾರ ರಚನೆಗೆ ಕಾರಣರಾದ ನಮ್ಮನ್ನು ಮರೆತು, ಯೋಗೇಶ್ವರ್ಗೆ ಮಣೆ ಹಾಕುತ್ತಿರುವುದು ಬೇಸರವಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ
ನಾವು ಕೆಲವರ ಕಣ್ಣಲ್ಲಿ ಕೆಲವು ರೀತಿ ಕಾಣುತ್ತೇವೆ. ಯಾರ ಮರ್ಜಿಯಲ್ಲಿ ಯಾರು ಖುರ್ಚಿ ಮೇಲೆ ಕುಳಿತಿದ್ದಾರೆ? ಕೆಲವರು ಇದನ್ನೆಲ್ಲಾ ಮರೆತಿದ್ದಾರೆ. ಸಿಎಂ ಸೇರಿದಂತೆ ಇಂದು ಇವರೆಲ್ಲಾ ಯಾರ ಸಹಕಾರದಿಂದ ಕುಳಿತಿದ್ದಾರೆ? ಯಾರ ಮರ್ಜಿಯಲ್ಲಿ ಕುಳಿತಿದ್ದಾರೆ ಎಂಬುದನ್ನ ಮರೆತಿದ್ದಾರೆ. ಹೊಳೆ ದಾಟುವ ತನಕ ಅಂಬಿಗ ಗಂಡ, ಹೊಳೆ ದಾಟಿದ ಮೇಲೆ ಅಂಬಿಗ… ಎನ್ನುವ ಸ್ಥಿತಿ ಇಂದು ಬಂದಿದೆ' ಎಂದು ವಿಶ್ವನಾಥ್ ಹೇಳಿದರು.
ನೂರಕ್ಕೆ ನೂರು ಸಿ.ಪಿ.ಯೋಗೇಶ್ವರ್ ಅವರನ್ನ ಮಂತ್ರಿ ಮಾಡುತ್ತೇನೆ ಎಂದು ಖುದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿಕೆ ಪ್ರತಿಕ್ರಿಯಿಸಿರುವ ವಿಶ್ವನಾಥ್, ಹುಣಸೂರಿನಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೇಶ್ವರ್ ಅವರೇ ಕಾರಣ. ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೊದಲೇ ತಾವೇ ಅಭ್ಯರ್ಥಿ ಎಂದು ಸೀರೆ, ಬಟ್ಟೆ ಹಂಚಿ ಪ್ರಚಾರ ನಡೆಸಿದರು. ನಾನು ಅಭ್ಯರ್ಥಿ ಎಂದು ಘೋಷಣೆಯಾದ ಮೇಲೂ ಪಕ್ಷದಿಂದ ಚುನಾವಣೆಗಾಗಿ ಬಂದ ಹಣ ನನಗೆ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.