
ಬೆಂಗಳೂರು, (ಫೆ.09): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ನಾನು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಅಚ್ಚರಿ ಹೇಳಿಕೆ ನೀಡಿದರು.
ವಿಧಾನಪರಿಷತ್ನಲ್ಲಿ ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡಿದ ವಿಶ್ವನಾಥ್, ನಾವಿಬ್ಬರು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದು ಹೇಳಿದರು. ಈ ವೇಳೆ ಸದನದಲ್ಲಿ ನಗೆಯ ಅಲೆ ತೇಲಿ ಬಂದಿತು.
ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ
ಕಾಂಗ್ರೆಸ್ ಸದಸ್ಯರ ಸಹಕಾರದಿಂದ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೀರಿ. ಹೊರಟ್ಟಿ ಎಂಬ ಶಬರಿ ಶಾಪವನ್ನು ಬಿಜೆಪಿಯ ಶ್ರೀರಾಮ ವಿಮೋಚನೆ ಮಾಡಿದ್ದಾರೆ ಎಂದು ವಿಶ್ವನಾಥ್ ಹೇಳುತ್ತಿದ್ದಂತೆಯೇ ಮತ್ತೆ ಸದನದಲ್ಲಿ ನಗೆಯ ಅಲೆ ಎದ್ದಿತು.
ಸಭಾಪತಿ ಹೊರಟ್ಟಿ ಹಾಗೂ ನಾನು ಜೆಡಿಎಸ್ನಲ್ಲಿದ್ದವರೇ. ಮರಿತಿಬ್ಬೇಗೌಡ ಅವರು ಮಾತನಾಡುವಾಗ, ಹೊರಟ್ಟಿಯವರು ಮಂತ್ರಿಯಾಗಬೇಕಿತ್ತು ಎಂದಿದ್ದರು. ಆದರೆ ಅದು ಆಗಲಿಲ್ಲ. ಕಾಂಗ್ರೆಸ್ ನನ್ನ ಪೂರ್ವಾಶ್ರಮ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಸಚಿವನಾಗಿದ್ದೆ. ಆಗ ನೀವು ಎಲ್ಲ ರೀತಿಯ ಸಹಕಾರವನ್ನು ಕೊಟ್ಟಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಕ ವೃತ್ತಿಯಿಂದ ಬಂದವರು ಏಳು ಬಾರಿ ಸೋಲಿಲ್ಲದ ಸರದಾರರು. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದು, ನಿಮ್ಮನ್ನು ಮೇಲ್ಪಂಕ್ತಿಗೆ ಹಾಕುವ ಮೂಲಕ ಮೌಲ್ಯಗಳನ್ನು ಕಾಪಾಡುವ ದೊಡ್ಡ ಜವಾಬ್ದಾರಿಯಿದೆ ನಿಮ್ಮ ಮೇಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.