ನನ್ನ ಹಣೆಬರಹ ಸರಿಯಿಲ್ಲ, ಮಂತ್ರಿಯಾಗಿದ್ದವನು ಮಾಜಿ ಆಗಿದ್ದೇನೆ: ಬಿಜೆಪಿ ನಾಯಕ ಬೇಸರ

Published : Nov 28, 2020, 03:31 PM ISTUpdated : Nov 28, 2020, 03:41 PM IST
ನನ್ನ ಹಣೆಬರಹ ಸರಿಯಿಲ್ಲ, ಮಂತ್ರಿಯಾಗಿದ್ದವನು ಮಾಜಿ ಆಗಿದ್ದೇನೆ: ಬಿಜೆಪಿ ನಾಯಕ ಬೇಸರ

ಸಾರಾಂಶ

ಮೈತ್ರಿ ಸರ್ಕಾರದಲ್ಲಿ ಮಂತ್ರಿ ಬಿಟ್ಟುಬಂದು ಬಿಜೆಪಿ ಸೇರಿರುವ ಎಂಟಿಬಿ ನಾಗರಾಜ್ ಇದೀಗ ಸಚಿವ ಸ್ಥಾನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.  

ಬೆಂಗಳೂರು,(ನ.28): ನನ್ನ ಹಣೆಬರಹ ಸರಿಯಿಲ್ಲ. ಹಾಗಾಗಿ ನಾನು ಮಂತ್ರಿಯಾಗಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. 

"

ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿಯಾಗಿ ಈಗ ಮಾಜಿ ಆಗಿದ್ದೇನೆ. ವಿಧಾನಪರಿಷತ್ ಸದಸ್ಯರಾಗಿ 5 ತಿಂಗಳಾಯಿತು. ನನಗೆ ಮಂತ್ರಿಯಾಗುವ ಅದೃಷ್ಟ ಕೂಡಿಬಂದಿಲ್ಲ ಎಂದು ಅಸಮಾಧಾನ ಹೊರಹಾಕಿದರು. 

ಸಚಿವ ಸ್ಥಾನ ಸಿಕ್ತು, ಈಗ ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯರು..!

ಯಾವಾಗ ಅದೃಷ್ಟ ಕೂಡಿಬರುತ್ತದೆಯೋ ಗೊತ್ತಿಲ್ಲ. ನನ್ನ ಹಣೆಬರಹ ಸರಿ ಇಲ್ಲದಿದ್ದಾಗ ಯಾರೂ ಏನು ಮಾಡಲು ಸಾಧ್ಯವಿಲ್ಲ. ಏನೇನಾಗುತ್ತದೆಯೋ ಆಗಲಿ ನಿರಾಸೆಯಾಗಿ ಹೇಳಿದರು. 

"

ದೆಹಲಿಗೆ ಹೋಗೋಣ ಎಂದು ಮುಖ್ಯಮಂತ್ರಿಗೆ ನಾನೇ ಹೇಳಿದ್ದೇನೆ. ಅವರು ಬಿಡುವು ಮಾಡಿಕೊಂಡು ಹೋಗೋಣ ಎಂದು ಹೇಳಿದ್ದಾರೆ. ಸಮಯ ಯಾವಾಗ ಕೂಡಿಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯ ತನಕ ಕಾಯಲೇಬೇಕಲ್ಲವೆ ಎಂದರು.

ಕೆಲವರ ಹಣೆಬರಹ ಚೆನ್ನಾಗಿದೆ. ಹಾಗಾಗಿ ಬೇಗ ಸಚಿವರಾಗಿದ್ದಾರೆ. ನನ್ನ ಹಣೆಬರಹ ಚೆನ್ನಾಗಿಲ್ಲದ ಕಾರಣ ನನಗೆ ಸಚಿವನಾಗುವ ಅದೃಷ್ಟ ಕೂಡಿಬಂದಿಲ್ಲ. ನಿನ್ನೆ ರಾತ್ರಿ ಸಭೆ ನಡೆದಿರುವುದಕ್ಕೆ ಯಾವ ವಿಶೇಷತೆಯೂ ಇಲ್ಲ. ಆಗಾಗ್ಗೆ ನಾವು ಭೇಟಿಯಾಗುವುದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ