ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ಮೂಲ-ವಲಸಿಗ: ಅಸಮಾಧಾನ ಸ್ಫೋಟ

Published : Nov 25, 2020, 02:39 PM ISTUpdated : Nov 25, 2020, 02:49 PM IST
ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ಮೂಲ-ವಲಸಿಗ: ಅಸಮಾಧಾನ ಸ್ಫೋಟ

ಸಾರಾಂಶ

ರಾಜ್ಯ ಬಿಜೆಪಿಯಲ್ಲಿ ಮೂಲ-ವಲಸಿಗರು ಎನ್ನುವ ಭಿನ್ನಾಪ್ರಾಯಗಳು ಉದ್ಭವಿಸಿದ್ದು, ಈ ನಾಯಕರು ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ.

ಬೆಂಗಳೂರು, (ನ.25): ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಸಚಿವಾಕಾಂಕ್ಷಿಗಳ ಲಾಬಿ ಕೂಡ ಭರ್ಜರಿಯಾಗಿ ಸಾಗಿದೆ. ಇದರ ಮಧ್ಯೆ ಮೂಲ-ವಲಸಿಗ ಬಿಜೆಪಿ ನಾಯಕರ ವಾಗ್ದಾವೂ ಸಹ ಶುರುವಾಗಿವೆ.

ಇದಕ್ಕೆ ಪೂರಕವೆಂಬಂತೆ ಎಂ.ಪಿ.ರೇಣುಕಾಚಾರ್ಯ ಹಾಗೂ ಎಂಟಿಬಿ ನಾಗಾರಾಜ್ ನಡುವೆ ವಾಕ್ಸಮರ ನಡೆದಿದೆ. ಕೇವಲ 17 ಜನರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ ಎಂದು ರೇಣುಕಾಚಾರ್ಯ ಗುಡುಗಿದ್ರೆ, 105 ಶಾಸಕರು ಇದ್ದಾಗ ಯಾಕೆ ಸರ್ಕಾರ ಮಾಡಲು ಆಗ್ಲಿಲ್ಲ ಎಂದು ಎಂಟಿಬಿ ನಾಗಾರಾಜ್ ತಿರುಗೇಟು ಕೊಟ್ಟಿದ್ದಾರೆ.

ಗರಂ ಆದ್ರೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ

17 ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಬಿಜೆಪಿ ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಕಾಂಗ್ರೆಸ್, ಜೆಡಿಎಸ್​ನಿಂದ ಬೇಸತ್ತವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಅಷ್ಟೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗಾರಾಜ್, 105 ಶಾಸಕರು ಇದ್ದಾಗ ಯಾಕೆ ಸರ್ಕಾರ ಮಾಡಲು ಆಗ್ಲಿಲ್ಲ..? ಹೀಗಾಗಿ 105 ಶಾಸಕರು ಮುಖ್ಯ , 17 ಶಾಸಕರು ಮುಖ್ಯ . ಎರಡು ಕೈ ಜೋಡಿಸಿದ್ದಕ್ಕೆ ತಾನೆ ಸರ್ಕಾರ ಬಂದಿರೋದು ಎಂದು ರೇಣುಕಾಚಾರ್ಯಗೆ ಟಾಂಗ್ ನೀಡಿದರು.
.
ಸಂಪುಟ ವಿಸ್ತರಣೆ ತಡವಾಗಿದೆ ಅಂತ ಅನಿಸ್ತಾ ಇದೆ. ಪದೇ ಪದೇ ನಾವು ದೆಹಲಿಗೆ ಹೋಗಿ ಒತ್ತಡ ಹಾಕೋದು ಸರಿಯಲ್ಲ. ಸಿಎಂ ಭೇಟಿಯಾದಗಲೆಲ್ಲಾ ಕೇಳ್ತಿವಿ. ಮಾಡ್ತಿವಿ ಮಾಡ್ತಿವಿ ಅಂತಾರೆ ಎಂದು ಸಂಪುಟ ವಿಸ್ತರಣೆ ವಿಳಂಬಕ್ಕೆ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌