ಸಿಎಂ ಬದಲಾವಣೆ ಮತ್ತೆ ಮುನ್ನೆಲೆಗೆ: ಮಹತ್ವದ ಪ್ರತಿಕ್ರಿಯೆ ಕೊಟ್ಟ ಬಿಜೆಪಿ ನಾಯಕ

Published : Nov 29, 2020, 03:33 PM IST
ಸಿಎಂ ಬದಲಾವಣೆ ಮತ್ತೆ ಮುನ್ನೆಲೆಗೆ: ಮಹತ್ವದ ಪ್ರತಿಕ್ರಿಯೆ ಕೊಟ್ಟ ಬಿಜೆಪಿ ನಾಯಕ

ಸಾರಾಂಶ

ಸಿಎಂ ಬಿಎಸ್ ಯಡಿಯೂರಪ್ಪನವರ ಬದಲಾವಣೆ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪ್ರಕ್ರಿಯೆ ಕೊಟ್ಟಿದ್ದಾರೆ.

ಬಾಗಲಕೋಟೆ, (ನ.29): ಆರ್‌.ಆರ್.ನಗರ ಹಾಗೂ ಶಿರ ಉಪಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬದಲಾವಣೆ ಮಾಡುವ ಸುದ್ದಿ ಹರಿದಾಡುತ್ತಿದೆ. 

ಹೈಕಮಾಂಡ್ ಈ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಮುನ್ನ ಬಿಎಸ್‌ವೈ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗೆ ಮುಂದಾಗಿದ್ದರು ಎನ್ನಲಾಗಿದೆ.

ನನ್ನ ಹಣೆಬರಹ ಸರಿಯಿಲ್ಲ, ಮಂತ್ರಿಯಾಗಿದ್ದವನು ಮಾಜಿ ಆಗಿದ್ದೇನೆ: ಬಿಜೆಪಿ ನಾಯಕ ಬೇಸರ

ಈ ಬಗ್ಗೆ ರಾಜ್ಯ ನಾಯಕರುಗಳ ಚರ್ಚೆ ನಡೆಸಲು ಡಿಸೆಂಬರ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್,  ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಚರ್ಚೆ ಎಲ್ಲೂ ನಡೆದಿಲ್ಲ. ಅವಧಿ ಮುಗಿಯುವವರೆಗೂ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದಿದ್ದಾರೆ.

ಭಾನುವಾರ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಶನಿವಾರ ನಾವು ಮಾಡಿದ್ದ ಸಭೆಯಲ್ಲಿ ಏನೂ ವಿಶೇಷ ಇರಲಿಲ್ಲ. ಸರ್ಕಾರದ ವಿಚಾರದ ಪ್ರಸ್ತಾಪ ಅಲ್ಲಿ ನಡೆದಿಲ್ಲ. ನಮ್ಮನ್ನು ಮಂತ್ರಿ ಮಾಡಬೇಕಿತ್ತು. ವಿಳಂಬವಾಗಿದೆ. ಸಂಪುಟ ವಿಸ್ತರಣೆ ವಿಳಂಬ ಆಗಲಿದೆ ಎಂದು ಸಿ.ಎಂ ಯಡಿಯೂರಪ್ಪ ಅವರೇ ಹೇಳಿದ ಮೇಲೆ ಅದೇನಾಗುತ್ತೋ ಅಂತ ನಾವು ಕಾಯಬೇಕು. ಮಂತ್ರಿ ಮಾಡ್ತೇವೆ, ಮಾಡ್ತೇವೆ ಅಂದಿದ್ದಾರೆ. ಕೆಲವೇ ದಿನಗಳಲ್ಲಿ ಆ ಸಂದರ್ಭ ಒದಗಿಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!