
ಹಾವೇರಿ, (ನ.30): ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಇನ್ನು ಆರ್. ಶಂಕರ್, ಎಂಟಿಬಿ ನಾಗರಾಜ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಂವಿಧಾನದಡಿ ಮರು ಆಯ್ಕೆ ಆಗಿರುವುದರಿಂದ ಅನರ್ಹತೆಯಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ಕೋರ್ಟ್ ಕೊಟ್ಟಿರುವ ಈ ತೀರ್ಪಿನ ಬಗ್ಗೆ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ಮಂತ್ರಿಯಾಗಲು ಇದ್ದಂತ ಕಾನೂನು ತೊಡಕು ನಿವಾರಣೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ವಿಶ್ವನಾಥ್ಗೆ ಬಿಗ್ ಶಾಕ್: ಮಂತ್ರಿಗಿರಿ ಕನಸು ಕಾಣುತ್ತಿದ್ದ ಹಳ್ಳಿಹಕ್ಕಿ ಕನಸಿಗೆ ತಣ್ಣೀರು
ಎಂಎಲ್ ಸಿ ಗಳಾದಂತ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಹಾಗೂ ಹೆಚ್ ವಿಶ್ವನಾಥ್ ಸಚಿವ ಸ್ಥಾನ ನೀಡುವ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.
ವಿಶ್ವನಾಥ್ ಸೋತು ನಾಮನಿರ್ದೇಶನಗೊಂಡು ಎಂಎಲ್ ಸಿ ಆಗಿದ್ದಾರೆ. ಅವರು ಸಚಿವರಾಗಲು ಅನರ್ಹರು. ಇನ್ನೂ ಎಂಟಿಬಿ ನಾಗರಾಜ್, ಆರ್ ಶಂಕರ್ ಚುನಾವಣೆಯ ಮೂಲಕ ಆಯ್ಕೆಗೊಂಡವರಂತಾಗಿದ್ದು, ಸಚಿವರಾಗಲು ಅರ್ಹರೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಇದರಿಂದ ಶಂಕರ್ ಹಾಗೂ ಎಂಟಿಬಿಗೆ ಬಿಗ್ ರಿಲೀಫ್ ಸಿಕ್ಕಿದ್ರೆ, ವಿಶ್ವನಾಥ್ ಮಂತ್ರಿಗಿರಿ ಆಸೆಗೆ ತಣ್ಣೀರೆರಚಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.