
ಹಾವೇರಿ, ಜ.11): ನಿನ್ನನ್ನ ಎಂಎಲ್ಸಿ ಮಾಡಿ ನಿನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಸಿಎಂ ಮಾತುಕೊಟ್ಟಿದ್ದಾರೆ. ಹೀಗಾಗಿ ನನ್ನನ್ನ ಈ ಬಾರಿ ಯಡಿಯೂರಪ್ಪ ಕೈಬಿಡುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಸಾಕಷ್ಟು ಅಪಪ್ರಚಾರಗಳು ನಡೆದಿದ್ದವು. ಏನೇ ಅಪಪ್ರಚಾರ ಮಾಡಿದರೂ ಸಿಎಂ ಯಡಿಯೂರಪ್ಪ ಈ ಬಾರಿ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು.
ನನ್ನನ್ನು ಸರ್ಕಾರದಿಂದ ಕೈಬಿಡುವಷ್ಟು ಧೈರ್ಯ ಯಾರಿಗಿದೆ ಸ್ವಾಮಿ: ಸಚಿವರ ಖಡಕ್ ಮಾತು
ನಿನ್ನ ಎಂಎಲ್ಸಿ ಮಾಡಿ ನಿನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಅದೇ ರೀತಿ ಅವರು ನಡೆದುಕೊಳ್ಳುತ್ತಾರೆ ಎಂಬ ಭರವಸೆ ನನಗಿದೆ ಎಂದರು.
ನಾನು ಎರಡು ಬಾರಿ ಮಂತ್ರಿಯಾಗಿದ್ದವನು. ಈ ಬಾರಿ ಸಂಪುಟದಲ್ಲಿ ಉತ್ತಮ ಖಾತೆ ಕೊಟ್ಟರೆ ಜನ ಸೇವೆ ಮಾಡಲು ನನಗೆ ಅನುಕೂಲವಾಗುತ್ತದೆ. ಯಡಿಯೂರಪ್ಪ ಸರ್ಕಾರಕ್ಕೆ ಹೆಸರು ತರುವಂಥ ಕೆಲಸವನ್ನು ನಾನು ಮಾಡುತ್ತೇನೆ. ಉತ್ತಮ ಖಾತೆ ನೀಡುವುದು ಸಿಎಂ ಪರಮಾವಧಿ, ನನಗೆ ಉತ್ತಮ ಖಾತೆ ಸಿಗುತ್ತದೆ ಎಂಬ ಭರವಸೆಯಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.