
ಮೈಸೂರು, (ಅ.05): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮೇಲೆ CBI ದಾಳಿ ಕುರಿತು ಮತನಾಡಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಅವರಿಗೆ ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದಿದ್ದಾರೆ.
"
ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮತನಾಡಿದ ಅವರು, ನಾನು ತುಂಬಾ ವರ್ಷ ಅವರ ಜೊತೆ ಇದ್ದವನು. ಈಗಾಗಿ ಈ ಮಾತು ಹೇಳುತ್ತಿದ್ದೇನೆ. ಡಿಕೆಶಿಗೆ ಇಂತಹವನ್ನು ಎದರಿಸುವುದು ಗೊತ್ತು. ಗೆದ್ದು ಬರುವುದೂ ಗೊತ್ತು. ಅವರಿಗೆ ಆ ಶಕ್ತಿ ಇದೆ ಎಂದು ಹೇಳಿದರು.
Live Blog |ಸಿಬಿಐ ದಾಳಿ: ಸಂಜೆ ನಾಲ್ಕು ಗಂಟೆ ವೇಳೆಗೆ ಡಿಕೆಶಿ ಭವಿಷ್ಯ ನಿರ್ಧಾರ
ಇವೆಲ್ಲ ದಾಳಿಗಳು ಒಂದು ರೀತಿಯಲ್ಲಿ ಸಹಜ. ಇವುಗಳನ್ನು ರಾಜಕೀಯ ದಾಳಿ ಎಂದು ವಿಶ್ಲೇಷಣೆ ಮಾಡುವುದು ಸರಿಯಲ್ಲ. ದಾಳಿ ಬಗ್ಗೆ ಹಾಗೆ ಹೇಳಿರುವ ಸಿದ್ದರಾಮಯ್ಯ ಹೇಳಿಕೆ ಸತ್ಯವಲ್ಲ. ಇವೆಲ್ಲವು ಒಂದೊಂದು ರೀತಿ ಸಹಜ ಪ್ರಕ್ರಿಯೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.