ಬಿಜೆಪಿ ದಲಿತರಿಗೆ ಸ್ಥಾನ ನೀಡದೆ ಅನ್ಯಾಯ: ರಮೇಶ್ ಜಿಗಜಿಣಗಿ ಹೇಳಿಕೆಗೆ ಕಾರಜೋಳ ಕಿಡಿ

Published : Jul 17, 2024, 04:47 PM ISTUpdated : Jul 17, 2024, 05:50 PM IST
ಬಿಜೆಪಿ ದಲಿತರಿಗೆ ಸ್ಥಾನ ನೀಡದೆ ಅನ್ಯಾಯ: ರಮೇಶ್ ಜಿಗಜಿಣಗಿ ಹೇಳಿಕೆಗೆ ಕಾರಜೋಳ ಕಿಡಿ

ಸಾರಾಂಶ

ಗೋವಿಂದ ಕಾರಜೋಳ ಅವರು, ಸಿಎಂ ಸಿದ್ದರಾಮಯ್ಯ ಸತ್ಯಹರಿಚಂದ್ರರಿಗೆ ಹೋಲಿಕೆ ಮಾಡಿಕೊಳ್ತಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಇರಲಿ ಹಗರಣ ಹಗರಣನೇ. ನಿಷ್ಪಕ್ಷಪಾತವಾಗಿ ತನಿಖೆ ಆಗಲೇಬೇಕು ಎಂದ ಬಿಜೆಪಿ ಸಂಸದ ಗೋವಿಂದ ಕಾರಜೋಳ 

ಹುಬ್ಬಳ್ಳಿ(ಜು.17):  ನಾವು ಪಕ್ಷದ ಚೌಕಟ್ಟಿನಲ್ಲಿ ಇರಬೇಕು, ಅದನ್ನ ಬಿಟ್ಟು ಏನೋ ಮಾತನಾಡಲು ಬರಲ್ಲ. ಏನೇ ಅಸಮಾಧಾನವಿದ್ದರೂ ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಬೇಕು ಎಂದು ಬಿಜೆಪಿ ದಲಿತರಿಗೆ ಸ್ಥಾನ ನೀಡದೆ ಅನ್ಯಾಯ ಮಾಡಿದೆ ಅನ್ನೋ ವಿಚಾರಕ್ಕೆ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆಗೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ.

ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ ಅವರು, ಸಿಎಂ ಸಿದ್ದರಾಮಯ್ಯ ಸತ್ಯಹರಿಚಂದ್ರರಿಗೆ ಹೋಲಿಕೆ ಮಾಡಿಕೊಳ್ತಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಇರಲಿ ಹಗರಣ ಹಗರಣನೇ. ನಿಷ್ಪಕ್ಷಪಾತವಾಗಿ ತನಿಖೆ ಆಗಲೇಬೇಕು ಎಂದು ತಿಳಿಸಿದ್ದಾರೆ. 

ಕೇಂದ್ರ ಸಂಪುಟದಲ್ಲಿ‌‌ ಸ್ಥಾನ ಸಿಗದ ವಿಷಯ ಬೇಡವೇ ಬೇಡ, ಬೇರೆ ಏನಾದ್ರೂ ಇದ್ರೆ ಕೇಳಿ: ರಮೇಶ್‌ ಜಿಗಜಿಣಗಿ‌

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಯಿಂದ ಅನುದಾನ ಇಲ್ಲಾ ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಕಾರಜೋಳ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಟ್ಟು 135 ಶಾಸಕರಿದ್ದಾರೆ. ಅವರಿಗೆ ಒಂದೇ ಒಂದು ರೂಪಾಯಿ ಹಣ ಬಂದಿಲ್ಲ. ಸುಮಾರು 50 ಜನ ಶಾಸಕರು ಅಸಮಾಧಾನದಲ್ಲಿದ್ದಾರೆ. ವಿನಯ್ ಕುಲಕರ್ಣಿ, ರಾಯರೆಡ್ಡಿ ಸೇರಿ ಹಲವರು ಈ ಬಗ್ಗೆ ಹೇಳಿದ್ದಾರೆ. ಮುಂದೆ ಅವರ ನಡೆ ಏನಿರುತ್ತೋ ಗೊತ್ತಿಲ್ಲ. ಹಾಲು ಕುಡಿದು ಸಾಯುವವರಿಗೆ ವಿಷ ಹಾಕುವ ಕೆಲಸ ಮಾಡೋದಿಲ್ಲ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್