ಬೆಳಗಾವಿ: ನನಗೆ ಬೆಂಬಲಿಸಿದ ಬೇರೆ ಪಕ್ಷದವರ ಹೆಸರು ಇನ್ನೊಮ್ಮೆ ಹೇಳ್ತಿನಿ, ಜಗದೀಶ್ ಶೆಟ್ಟರ್ ಅಚ್ಚರಿ ಹೇಳಿಕೆ

By Girish GoudarFirst Published Jun 13, 2024, 1:59 PM IST
Highlights

ನನಗೆ ಬೆಂಬಲಿಸಿದ ಬೇರೆ ಪಕ್ಷದವರ ಹೆಸರು ಈಗ ಬೇಡ, ಇನ್ನೊಮ್ಮೆ ಹೇಳ್ತಿನಿ. ಎಲ್ಲ ಪಕ್ಷದ ನಾಯಕರು, ಎಲ್ಲ ಭಾಷಿಕರು ನನ್ನ ಬೆಂಬಲಕ್ಕೆ ನಿಂತರು ಎಂದು ಹೇಳಿದ ಬೆಳಗಾವಿ ನೂತನ ಸಂಸದ ಜಗದೀಶ್ ಶೆಟ್ಟರ್ 
 

ಬೆಳಗಾವಿ(ಜೂ.13):  ಚುನಾವಣೆಯಲ್ಲಿ ಒಳ ಹೊಡೆತ, ಹೊರ ಹೊಡೆತಗಳೆರಡೂ ಇರ್ತಾವೆ. ಚುನಾವಣೆಯಲ್ಲಿ ಪರೋಕ್ಷವಾಗಿ ಸಹಾಯ ಮಾಡಿದವರಿಗೆ ಧನ್ಯವಾದ ಸಲ್ಲಿಸುವೆ ಎಂದು ಬೆಳಗಾವಿ ನೂತನ ಸಂಸದ ಜಗದೀಶ್ ಶೆಟ್ಟರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನನಗೆ ಬೆಂಬಲಿಸಿದ ಬೇರೆ ಪಕ್ಷದವರ ಹೆಸರು ಈಗ ಬೇಡ, ಇನ್ನೊಮ್ಮೆ ಹೇಳ್ತಿನಿ. ಎಲ್ಲ ಪಕ್ಷದ ನಾಯಕರು, ಎಲ್ಲ ಭಾಷಿಕರು ನನ್ನ ಬೆಂಬಲಕ್ಕೆ ನಿಂತರು ಎಂದು ಹೇಳಿದ್ದಾರೆ. 

Latest Videos

ಜಗದೀಶ್‌ ಶೆಟ್ಟರ್‌ಗೆ ರಾಜಕೀಯ ಮರುಜನ್ಮ ನೀಡಿದ ಬೆಳಗಾವಿ..!

ನನ್ನ ಗೆಲುವಿನಲ್ಲಿ ನಾಲ್ಕು ಗೇಮ್ ಚೇಂಜರ್‌ಗಳಿವೆ. ಮಾರ್ಚ್ 27 ಕ್ಕೆ ಬಂದಾಗ ಬೆಳಗಾವಿ ಜನ ಅಭೂತಪೂರ್ವ ಸ್ವಾಗತ ಕೋರಿದರು. ಏಪ್ರಿಲ್ 17 ರಂದು ನಡೆದ ನಾಮಪತ್ರ ಸಲ್ಲಿಕೆ ವೇಳೆ ಜನ ಸೇರಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಿದ್ದು, ದಿ. ಸುರೇಶ್‌ ಅಂಗಡಿ ಅವರ 16 ವರ್ಷಗಳ ಕಾಲ ಸಲ್ಲಿಸಿದ ಸೇವೆಯೇ ನನಗೆ ಗೇಮ್ ಚೇಂಜರ್ ಎಂದು ಶೆಟ್ಟರ್ ತಿಳಿಸಿದ್ದಾರೆ. 

ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಕಾಂಗ್ರೆಸ್ ‌ಶಾಸಕರ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜಗದೀಶ್‌ ಶೆಟ್ಟರ್‌, ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ರಾಷ್ಟ್ರದ ನಾಯಕತ್ವ ಮೇಲೆ ನಡೆಯುತ್ತದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ನಾವು ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದರು. ಗ್ಯಾರಂಟಿ ಮೇಲೆ ಗೆಲ್ಲುವ ಭರವಸೆ ಹೊಂದಿದ್ದ ಕಾಂಗ್ರೆಸ್ ‌ನಾಯಕರಿಗೆ ನಿರಾಸೆ ಆಗಿದೆ. ಕಾಂಗ್ರೆಸ್ ಶಾಸಕರೇ ಈಗ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗ್ಯಾರಂಟಿಗಳಿಗೆ ವಿರೋಧ ವ್ಯಕ್ತವಾಗ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಾವ ಕಾಂಗ್ರೆಸ್ ಶಾಸಕರು ಖುಷಿಯಿಲ್ಲ. ಶಾಸಕರ ಒತ್ತಡಕ್ಕೆ ಮಣಿದು ಬಹುಶಃ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ. 

ಲೋಕಸಭೆ ‌ಚುನಾವಣೆ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್‌, ಲಕ್ಷ್ಮಣ ಸವದಿ ನನ್ನ ಸಂಪರ್ಕವನ್ನೂ ಮಾಡಿಲ್ಲ. ಕಾಂಗ್ರೆಸ್ ಒಳಜಗಳ ಅವರ ಹಣೆಬರಹ ಎಂದು ಹೇಳಿದ್ದಾರೆ. 
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಕಾಂಗ್ರೆಸ್ ‌ಶಾಸಕರ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜಗದೀಶ್‌ ಶೆಟ್ಟರ್‌, ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ರಾಷ್ಟ್ರದ ನಾಯಕತ್ವ ಮೇಲೆ ನಡೆಯುತ್ತದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ನಾವು ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದರು. ಗ್ಯಾರಂಟಿ ಮೇಲೆ ಗೆಲ್ಲುವ ಭರವಸೆ ಹೊಂದಿದ್ದ ಕಾಂಗ್ರೆಸ್ ‌ನಾಯಕರಿಗೆ ನಿರಾಸೆ ಆಗಿದೆ. ಕಾಂಗ್ರೆಸ್ ಶಾಸಕರೇ ಈಗ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗ್ಯಾರಂಟಿಗಳಿಗೆ ವಿರೋಧ ವ್ಯಕ್ತವಾಗ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಾವ ಕಾಂಗ್ರೆಸ್ ಶಾಸಕರು ಖುಷಿಯಿಲ್ಲ. ಶಾಸಕರ ಒತ್ತಡಕ್ಕೆ ಮಣಿದು ಬಹುಶಃ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ. 

ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದಿಂದ ಸರ್ಕಾರ ಪತನ: ಜಗದೀಶ್‌ ಶೆಟ್ಟರ್‌

ಲೋಕಸಭೆ ‌ಚುನಾವಣೆ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್‌, ಲಕ್ಷ್ಮಣ ಸವದಿ ನನ್ನ ಸಂಪರ್ಕವನ್ನೂ ಮಾಡಿಲ್ಲ. ಕಾಂಗ್ರೆಸ್ ಒಳಜಗಳ ಅವರ ಹಣೆಬರಹ ಎಂದು ಹೇಳಿದ್ದಾರೆ. 

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವಿಗೆ ಯಾವ್ಯಾವ ಪಕ್ಷದ ನಾಯಕರು ಬೆಂಬಲ ಸೂಚಿಸಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದಕ್ಕೆಲ್ಲಾ ಅವರೇ ಉತ್ತರ ಹೇಳಬೇಕಿದೆ. 

click me!