
ಮಂಗಳೂರು(ಫೆ.02): ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಆತ್ಮನಿರ್ಭರ ಭಾರತವನ್ನು ಪ್ರತಿಬಿಂಬಿಸಿದ ಬಜೆಟ್. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದರೂ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಅಭಿವೃದ್ಧಿಯ ಚಿಂತನೆ, ಸುಭದ್ರ ಭಾರತದ ದೃಷ್ಟಿಕೋನ ಇರಿಸಿ ಮಂಡಿಸಲಾದ ಜನಪ್ರಿಯ ಬಜೆಟ್ ಆಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಬಜೆಟ್ನಲ್ಲಿ ಬಡವರು, ಮಧ್ಯಮ ವರ್ಗದ ಅನುಕೂಲಕ್ಕಾಗಿ ವಿಶೇಷ ಒತ್ತು ನೀಡಲಾಗಿದೆ. ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಬಜೆಟ್ ಆಗಿದ್ದು, ಪ್ರವಾಸೋದ್ಯಮ, ಮೀನುಗಾರಿಕೆ, ರೈಲ್ವೆ ಮತ್ತು ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಮೋದಿ ಸರ್ಕಾರ ಹೊಸ ಘೋಷಣೆ ಮಾಡಿಲ್ಲ ಯಾಕೆ? ಬಜೆಟ್ ವಿಶ್ಲೇಷಣೆ!
ಒಟ್ಟಿನಲ್ಲಿ ವಿತ್ತೀಯ ಶಿಸ್ತಿನ ಬಜೆಟ್ ಆಗಿದ್ದು, ಈ ಮೂಲಕ ಕೇಂದ್ರ ಸರ್ಕಾರದ ಸ್ಥೈರ್ಯವನ್ನು ಬಿಂಬಿಸಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.