
ಮೈಸೂರು, (ನ.25): ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರ ಇತ್ತು. ಈಗ ಸಿಎಂ ಆದರಲ್ಲ, ಇನ್ನೇನು? ಆ ದರ್ದು ಅವರಿಗೆ ಇಲ್ಲ, ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.
ಸುತ್ತೂರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಸಿಎಂ ವಿರುದ್ಧ ಹರಿಹಾಯ್ದರು. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿಮ್ಮ ಸಲಹೆ ಪಡೆದಿದ್ದಾರಾ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರ ಇತ್ತು. ಈಗ ಸಿಎಂ ಆದರಲ್ಲ, ಇನ್ನೇನು? ಆ ದರ್ದು ಅವರಿಗೆ ಇಲ್ಲ, ಈಗ ಆರಾಮಾಗಿ ಇದ್ದಾರೆ, ನೋಡ್ಕೋತೀವಿ ಬಿಡಿ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.
ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ಮೂಲ-ವಲಸಿಗ: ಅಸಮಾಧಾನ ಸ್ಫೋಟ
ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಒಂದೊಂದಾಗೇ ತುಂಬಿಸುತ್ತಿದ್ದಾರೆ. ಈ ನಡುವೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಕೂಡ ಜೋರಾಗೇ ಎದ್ದಿದೆ.
ಅದರಲ್ಲೂ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗವಾಗೇ ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಮುಂದೆ ನೋಡಿಕೊಳ್ಳುತ್ತೇವೆ ಬಿಡಿ ಎಂದು ಸವಾಲು ಹಾಕಿದ್ದಾರೆ. ಯಡಿಯೂರಪ್ಪನವರ ಸರ್ಕಾರ ಬರಲು ಪ್ರಮುಖ ಪಾತ್ರ ವಹಿಸಿದ ಶ್ರೀನಿವಾಸ್ ಪ್ರಸಾದ್ ಹೇಳಿಕೆ ಇದೀಗ ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.