ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By Govindaraj SFirst Published May 29, 2024, 11:05 PM IST
Highlights

ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. 

ಬೈಲಹೊಂಗಲ (ಮೇ.29): ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೈಲಹೊಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಬುದನೂರ, ತಡಸಲೂರ, ಹಾರುಗೊಪ್ಪ ಹಾಗೂ ಮರಕುಂಬಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಪರ ಪ್ರಚಾರ ಕೈಗೊಂಡು ಮಾತನಾಡಿದರು.

ನೇಹಾ ಪಾಟೀಲ್ ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದೆ. ತನಿಖೆ ವಿಳಂಬವಾಗಬಾರದೆನ್ನುವ ಕಾರಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಕ್ರಮಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಷ್ಟೇ ಪುರುಷರಿಗೂ ಅನುಕೂಲವಾಗಿದೆ. ಉಚಿತ ಕರೆಂಟ್, ಗೃಹಲಕ್ಷ್ಮಿ ಹಣಗಳಿಂದ ಪುರುಷರಿಗೂ ಅನುಕೂಲ. ಮನೆಯ ಖರ್ಚು ವೆಚ್ಚವನ್ನು ಮಹಿಳೆಯರೇ‌ ನಿಭಾಯಿಸುತ್ತಿದ್ದಾರೆ. ಬೆಳಗಾವಿಯ ಕಷ್ಟ ಸುಖಗಳು ಬಿಜೆಪಿ ಅಭ್ಯರ್ಥಿಗೆ ಗೊತ್ತಿಲ್ಲ. 

Latest Videos

ನನ್ನ ದೂಷಿಸುವ ಸಚಿವ ಪ್ರಿಯಾಂಕ್‌ ತಾವೇ ಮೈಪೂರ್ತಿ ಗ್ರೀಸ್‌ ಮೆತ್ತಿಕೊಂಡಿದ್ದಾರೆ: ಆಂದೋಲಾ ಶ್ರೀ ಲೇವಡಿ

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಗೆದ್ದರೇ ಶಾಸಕ ಮಹಾಂತೇಶ್ ಕೌಜಲಗಿ ಅವರ ಮಾರ್ಗದರ್ಶನದಲ್ಲಿ ಬೈಲಹೊಂಗಲ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾನೆ ಎಂದು ಭರವಸೆ ನೀಡಿದರು. ಶಾಸಕ ಮಹಾಂತೇಶ್ ಕೌಜಲಗಿ ಮಾತನಾಡಿ, ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್, ಕೇಂದ್ರ ಸರ್ಕಾರದ ನೀತಿ ವಿರುದ್ಧ ಹೋರಾಡುವ ಸಮಯ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಯೋಗ್ಯನಾಗಿದ್ದು, ಈ ಬಾರಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಶಿವರುದ್ರ ಹಟ್ಟಿಹೊಳಿ, ಮಹಾಂತೇಶ್ ಮತ್ತಿಕೊಪ್ಪ, ಶಂಕರಗೌಡ ಪಾಟೀಲ, ಕಾರ್ತಿಕ್ ಪಾಟೀಲ್, ಮಹಾಂತೇಶ್ ನರಸನ್ನವರ, ಗೀತಾಬಾಯಿ ದೇಸಾಯಿ, ಎಂ.ಎಸ್.ಪಟ್ಟಣ, ಸಿ.ಬಿ.ಜಕ್ಕಣ್ಣವರ, ಈರಣ್ಣ ಸಾಲಿ, ಶಿವಾನಂದ ನಿಲಪ್ಪನವರ, ಆನಂದ್ ಕುರುಬುರ್, ಬಸಪ್ಪ ಮಾಳಗಿ, ಪತ್ರಯ್ಯ ಹಿರೇಮಠ, ವೆಂಕನಾಯ್ಕ್ ಪಾಟೀಲ, ಬಸವರಾಜ ಜಕಾತಿ, ಮಲ್ಲಿಕಾರ್ಜುನ ಕೆಂಗೇರಿ, ಲಕ್ಕಪ್ಪ ಶಿವಣ್ಣವರ್, ಹನುಮಂತ ತಳವಾರ್, ಯಲ್ಲಪ್ಪ ನಾಯ್ಕರ್, ಉಮೇಶ್ ಮರಗಲ್ಲ, ಮಹಾಂತೇಶ್ ಮರಗಲ್ಲ, ಲಕ್ಷ್ಮಣ್ ತಳವಾರ, ಸೋಮಪ್ಪ ಮರಗಲ್ಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಮಮಂದಿರ ನಿರ್ಮಾಣ ಮಾಡಿದ್ರೆ ಜವಾಬ್ದಾರಿ ಮುಗಿಯಲ್ಲ: ಪೇಜಾವರ ಶ್ರೀ

ಕಳೆದ 10 ವರ್ಷಗಳಿಂದಷ್ಟೇ ದೇಶ ನಡೆಯುತ್ತಿದೆ ಎನ್ನುವ ಭ್ರಮೆಯನ್ನು ಬಿಜೆಪಿ ಹುಟ್ಟಿಸುತ್ತಿದೆ. ಸ್ವಾತಂತ್ರ್ಯದ ಬಳಿಕ ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿದ್ದ 502 ರಾಜ‌ ಸಂಸ್ಥಾನಗಳನ್ನು ಒಗ್ಗೂಡಿಸುವುದೇ ದೊಡ್ಡ ಕೆಲಸವಾಯಿತು‌. ದೇಶದಲ್ಲಿ ಸೂಜಿ ತಯಾರಿಸಲೂ ಆಗದ ಪರಿಸ್ಥಿತಿ ಇತ್ತು. ಒಂದು ಹೊತ್ತು ಊಟಕ್ಕೂ ಪರದಾಡಬೇಕಿತ್ತು. ಇಂಥ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಿದ್ದು ಕಾಂಗ್ರೆಸ್ ಪಕ್ಷ.
ಲಕ್ಷ್ಮೀ ಹೆಬ್ಬಾಳಕರ್‌, ಸಚಿವೆ.

click me!