ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ

Kannadaprabha News   | Asianet News
Published : Nov 27, 2020, 09:33 AM IST
ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ

ಸಾರಾಂಶ

ನಿರ್ಣಯ ಮಂಡನೆ ಕೋರಿ ಶಾಸಕರಿಂದ ಮನವಿ ಸಲ್ಲಿಕೆ| ಬಿಜೆಪಿ-ಜೆಡಿಎಸ್‌ ಒಂದಾಗಿ ಹೊಸ ಸಭಾಪತಿ ಆಯ್ಕೆ ಸಾಧ್ಯತೆ| ಸಿಎಂ ಕರೆದಿದ್ದ ಪಕ್ಷದ ಪರಿಷತ್‌ ಸದಸ್ಯರ ಸಭೆಯಲ್ಲಿ ಸಭಾಪತಿ ಬದಲಾವಣೆ ಮಾಡುವ ಬಗ್ಗೆ ಚರ್ಚೆ|   

ಬೆಂಗಳೂರು(ನ.27):  ನಿರೀಕ್ಷಿಸಿದಂತೆ ವಿಧಾನಪರಿಷತ್‌ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕೋರಿ ಬಿಜೆಪಿ ಸದಸ್ಯರು ಮೇಲ್ಮನೆ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

ಆಯನೂರು ಮಂಜುನಾಥ್‌, ವೈ. ಎ. ನಾರಾಯಣಸ್ವಾಮಿ ಸೇರಿದಂತೆ ಹಲವು ಸದಸ್ಯರು, ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿದ್ದಾರೆ. ಡಿಸೆಂಬರ್‌ 7ರಿಂದ 15ರವರೆಗೆ ನಡೆಯಲಿರುವ ಅಧಿವೇಶನದ ವೇಳೆ ಬಿಜೆಪಿ ಸದಸ್ಯರು ಕೋರಿರುವ ಸೂಚನೆ ಮೇರೆಗೆ ಸಭಾಪತಿಗಳು ನಿರ್ಣಯ ಮಂಡಿಸಲಿದ್ದಾರೆ.

ಕೋವಿಡ್ ಪಾಸಿಟಿವ್: ಸದನದ ಕಲಾಪಕ್ಕೆ ಹಾಜರಾಗಲ್ಲ, ಸಭಾಪತಿಗೆ MLC ಪತ್ರ

ಈ ಹಿಂದಿನ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರತಾಪಚಂದ್ರ ಶೆಟ್ಟಿಅವರನ್ನು ಸಭಾಪತಿಯಾಗಿ ಆಯ್ಕೆ ಮಾಡಲಾಗಿತ್ತು. ಉಪಸಭಾಪತಿಯಾಗಿ ಜೆಡಿಎಸ್‌ನ ಎಲ್‌.ಎಸ್‌. ಧರ್ಮೇಗೌಡ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಈಗ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವಿನ ಸಂಬಂಧ ಹಳಸಾಗಿದೆ. ಸದ್ಯ ಜೆಡಿಎಸ್‌ ಹಾಗೂ ಬಿಜೆಪಿ ನಡುವೆ ಸ್ನೇಹ ಚಿಗುರಿದೆ. ಮೇಲ್ಮನೆಯಲ್ಲಿ ಬಿಜೆಪಿ ಬಲ ಇತ್ತೀಚಿನ ಚುನಾವಣೆಯಲ್ಲಿ ಹೆಚ್ಚಿದೆ.
ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಪ್ರತಾಪಚಂದ್ರ ಶೆಟ್ಟಿಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಿ ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಲು ಮುಂದಾಗಿದೆ. ಅವಿಶ್ವಾಸ ನಿರ್ಣಯಕ್ಕೆ ಬೆಂಬಲಿಸಿದ್ದಕ್ಕೆ ಪ್ರತಿಯಾಗಿ ಜೆಡಿಎಸ್‌ನ ಧರ್ಮೇಗೌಡ ಅವರನ್ನು ಉಪಸಭಾಪತಿಯಾಗಿ ಮುಂದುವರೆಸುವ ಸಾಧ್ಯತೆ ಇದೆ.

ಕಳೆದ ಅಧಿವೇಶನದ ವೇಳೆ ಸರ್ಕಾರದ ಕೆಲವು ಮಹತ್ವದ ವಿಧೇಯಕಗಳಿಗೆ ಸದನ ಒಪ್ಪಿಗೆ ನೀಡುವ ಮೊದಲೇ ಸದನವನ್ನು ದಿಢೀರೆಂದು ಮುಂದೂಡಿದ್ದರು. ಈ ಬೆಳವಣಿಗೆ ಬಗ್ಗೆ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕರೆದಿದ್ದ ಪಕ್ಷದ ಪರಿಷತ್‌ ಸದಸ್ಯರ ಸಭೆಯಲ್ಲಿ ಸಭಾಪತಿ ಬದಲಾವಣೆ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ನಂತರದ ದಿನಗಳಲ್ಲಿ ಇದಕ್ಕೆ ಪೂರಕವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜೊತೆ ಯಡಿಯೂರಪ್ಪ ಮಾತುಕತೆ ನಡೆಸಿದ್ದರು. ಇತ್ತೀಚೆಗೆ ನಡೆದ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೇಲ್ಮನೆಯಲ್ಲಿ ಅದರ ಬಲ ಹೆಚ್ಚಾಗಿದೆ. ಒಟ್ಟು 75 ಸದಸ್ಯರನ್ನು ಹೊಂದಿರುವ ವಿಧಾನ ಪರಿಷತ್‌ನಲ್ಲಿ ಪ್ರಸ್ತುತ ಬಿಜೆಪಿ 31, ಸಭಾಪತಿ ಪ್ರತಾಪಚಂದ್ರ ಶೆಟ್ಟಿ  ಸೇರಿದಂತೆ ಕಾಂಗ್ರೆಸ್‌ 29, ಜೆಡಿಎಸ್‌ 14, ಪಕ್ಷೇತರ ಒಬ್ಬರು ಇದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ: ಸರ್ಕಾರಕ್ಕೆ ಸಿ.ಟಿ.ರವಿ ಸವಾಲು